AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

TV9 Web
| Edited By: |

Updated on: Aug 04, 2026 | 11:45 AM

Share

ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ನೀಡಲು ಮುಂದಾದರೆ ತಕ್ಷಣ ಅಂಗೀಕಾರ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ಪ್ರಾಮುಖ್ಯತೆ ನೀಡುವಂತೆ ಕರೆ ನೀಡಿದ ಅವರು, ಬರ ಪರಿಹಾರ ಕಾರ್ಯಗಳತ್ತ ಗಮನಹರಿಸಲು ಸಚಿವರು ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜೀನಾಮೆ ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಬೆಂಗಳೂರು ಆ. 4: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೇ ಸಚಿವ ಸ್ಥಾನ ಕೈತಪ್ಪಿ ಅಸಮಾಧಾನಗೊಂಡಿರುವ ಹಾಗೂ ರಾಜೀನಾಮೆ ನೀಡುತ್ತೇವೆ ಎಂದು ಹೇಳಿಕೆ ನೀಡುತ್ತಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಶಿಸ್ತು ಮೀರಿ ರಾಜೀನಾಮೆ ನಾಟಕವಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಾಗಿ ಹೇಳಿದ್ದಾರೆ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ನೀಡಲು ಬಂದರೆ, ಕಿಂಚಿತ್ತೂ ವಿಳಂಬ ಮಾಡದೆ ಕ್ಷಣಮಾತ್ರದಲ್ಲೇ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗುವುದು ಎಂದು ಸಿಎಂ ಹಾಕಿದ್ದಾರೆ. ಸರ್ಕಾರ ಅಥವಾ ಪಕ್ಷಕ್ಕೆ ರಾಜೀನಾಮೆ ಬೆದರಿಕೆ ಒಡ್ಡುವ ಮೂಲಕ ಒತ್ತಡ ಹೇರಲು ಯತ್ನಿಸುವವರ ತಂತ್ರಗಳಿಗೆ ಹೈಕಮಾಂಡ್ ಅಥವಾ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಎಲ್ಲರಿಗೂ ಒಂದೇ ಬಾರಿಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹಿರಿಯರು ಹಾಗೂ ಆಕಾಂಕ್ಷಿಗಳು ತಾಳ್ಮೆಯಿಂದಿರಬೇಕು. ಪಕ್ಷದ ನಿಯಮ ಮತ್ತು ಶಿಸ್ತನ್ನು ಮೀರಿ ನಡೆಯುವವರನ್ನು ಸಹಿಸುವುದಿಲ್ಲ ಎಂದು ಸಿಎಂ ಖಡಕ್ ಆಗಿ ಎಚ್ಚರಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us