AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru:  ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲೇ ಹರಿಹಾಯ್ದ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್

Bengaluru:  ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲೇ ಹರಿಹಾಯ್ದ ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Jan 25, 2023 | 2:28 PM

Share

ಇದು ರಾಜಕಾರಣ ಅವನಿಗೆ ನಮ್ಮ ವಿರುದ್ಧ ಆರೋಪಗಳಿದ್ದರೆ ಸಿಬಿಐಗೆ ದೂರು ನೀಡಲಿ ಅಂತ ಕೋಪದಿಂದಲೇ ಶಿವಕುಮಾರ್ ಹೇಳಿದರು.

ಬೆಂಗಳೂರು:  ಬೇರೆ ಪಕ್ಷಗಳ ನಾಯಕರು ಮತ್ತು ತನ್ನ ಎದುರಾಳಿಗಳ ವಿರುದ್ಧ ಮಾತಾಡುವಾಗ ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಏಕವಚನದ ಸಂಬೋಧನೆ ಮಾಡುವುದಿಲ್ಲ. ಇಂದು ಬೆಂಗಳೂರಲ್ಲಿ ಸುದ್ದಿಗಾರರು ರಮೇಶ್ ಜಾರಕಿಹೊಳಿ (Ramesh Jarkiholi) ಕಾಂಗ್ರೆಸ್ ಪಕ್ಷದ ವಿರುದ್ಧ ಮಾಡಿರುವ ಅರೋಪಗಳ ಬಗ್ಗೆ ಕೇಳಿದಾಗ ಅವರು ಗೋಕಾಕ (Gokak) ಶಾಸಕನ ವಿರುದ್ಧ ಕೆಂಡ ಕಾರಿದರು. ನಮ್ಮ ಪಕ್ಷವನ್ನು ಹಾಳು ಮಾಡಿದವನೇ ಅವನು, ಪ್ರತಿ ವೋಟಿಗೆ ರೂ. 6,000 ಕೊಡು ಅಂತ ನಾವು ಅವನಿಗೆ ಹೇಳಿದ್ದೆವಾ? ಅಂತ ಕೇಳಿದ ಶಿವಕುಮಾರ್ ಪರೋಕ್ಷವಾಗಿ ಜಾರಕಿಹೊಳಿ ಅವರ ಲೈಂಗಿಕ ಸಿಡಿಯ ಬಗ್ಗೆಯೂ ಪ್ರಸ್ತಾಪಿಸಿದರು. ಇದು ರಾಜಕಾರಣ ಅವನಿಗೆ ನಮ್ಮ ವಿರುದ್ಧ ಆರೋಪಗಳಿದ್ದರೆ ಸಿಬಿಐಗೆ ದೂರು ನೀಡಲಿ ಅಂತ ಕೋಪದಿಂದಲೇ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 25, 2023 02:27 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.