ಕರ್ನಾಟಕ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಮುಹೂರ್ತ ಬಹುತೇಕ ಫಿಕ್ಸ್
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಅಜ್ಜಯ್ಯನವರ ಸಲಹೆ ಹಾಗೂ ಶುಭ ಮುಹೂರ್ತದ ಮೇರೆಗೆ ಈ ದಿನಾಂಕ ನಿಗದಿಪಡಿಸಲಾಗಿದೆ. 12 ರಿಂದ 14 ಸಚಿವರು ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಬೆಂಗಳೂರು, ಮೇ 30: ಡಿಕೆ ಶಿವಕುಮಾರ್ ಜೂನ್ 3 ರಂದು ಲೋಕಭವನದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ ಎಂಬುದು ತಿಳಿದುಬಂದಿದೆ. ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ ಆಧಾರದ ಮೇಲೆ ಈ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ರಾಜ್ಯಪಾಲರನ್ನು ಬೆಳಗ್ಗೆ ಭೇಟಿ ಮಾಡಿದ ನಂತರ, ಡಿ ಕೆ ಶಿವಕುಮಾರ್ ಅವರು ನಾಗರಭಾವಿಯಲ್ಲಿರುವ ಶಾಖಾಮಠಕ್ಕೆ ಭೇಟಿ ನೀಡಿ ಅಜ್ಜಯ್ಯನವರ ಆಶೀರ್ವಾದ ಪಡೆದರು. ಸಿಎಲ್ಪಿ ಸಭೆ ಸಂಜೆ 4 ಗಂಟೆಗೆ ನಡೆಯಲಿದ್ದು, ಅದರಲ್ಲಿ ಡಿಕೆ ಶಿವಕುಮಾರ್ ಅವರನ್ನು ಅಧಿಕೃತವಾಗಿ ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. ಡಿಕೆ ಶಿವಕುಮಾರ್ ಅವರೊಂದಿಗೆ 12 ರಿಂದ 14 ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 30, 2026 01:49 PM
Follow Us
