AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prajadhvani Yatre: ಪಿರಿಯಾಪಟ್ಟಣ ಸಭೆಯಲ್ಲಿ ವೇದಿಕೆಯ ಪಕ್ಕ ನಿಂತು ಜೋರಾಗಿ ಮಾತಾಡುತ್ತಿದ್ದ ವ್ಯಕ್ತಿಯನ್ನು ಗದರಿದ ಡಿಕೆ ಶಿವಕುಮಾರ್

Prajadhvani Yatre: ಪಿರಿಯಾಪಟ್ಟಣ ಸಭೆಯಲ್ಲಿ ವೇದಿಕೆಯ ಪಕ್ಕ ನಿಂತು ಜೋರಾಗಿ ಮಾತಾಡುತ್ತಿದ್ದ ವ್ಯಕ್ತಿಯನ್ನು ಗದರಿದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 17, 2023 | 1:06 PM

Share

ಗಲಾಟೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕೋಪ ಕಾರಿದ ಶಿವಕುಮಾರ್ ನನ್ನ ಮಾತು ಕೇಳುವ ಇಚ್ಛೆ ಇರದಿದ್ದರೆ ಅಲ್ಲಿಂದ ಹೋಗುವಂತೆ ಹೇಳುತ್ತಾರೆ. ನಂತರ ಮಾತು ಮುಂದುವರಿಸುವ ಅವರು ತಡವಾಗಿ ಆಗಮಿಸಿದ್ದಕ್ಕೆ ಜನರ ಕ್ಷಮೆ ಕೇಳುತ್ತಾರೆ.

ಮೈಸೂರು: ಗುರುವಾರದಂದು ಪ್ರಜಾಧ್ವನಿ ಯಾತ್ರೆಯ (Prajadhvani Yatre) ಅಂಗವಾಗಿ ಮೈಸೂರಿನ ಪಿರಿಯಾಪಟ್ಟಣವನ್ನು (Piriyapatna) ಬಹಳ ತಡವಾಗಿ ತಲುಪಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅಲ್ಲಿಗೆ ಮುಟ್ಟುವಾಗಲೇ ತಾಳ್ಮೆ ಕಳೆದುಕೊಂಡಿದ್ದರು. ಅವರು ಭಾಷಣ ಆರಂಭಿಸಿದಾಗ ವೇದಿಕೆಯ ಬಲಭಾಗದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ಜೋರಾದ ಧ್ವನಿಯಲ್ಲಿ ಮಾತಾಡುತ್ತಿದ್ದ. ಆ ಗಲಾಟೆಯಿಂದ ಶಿವಕುಮಾರ್ ಸಹನೆ ಮತ್ತಷ್ಟು ಕೆಟ್ಟಿತು. ಗಲಾಟೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕೋಪ ಕಾರಿದ ಶಿವಕುಮಾರ್ ನನ್ನ ಮಾತು ಕೇಳುವ ಇಚ್ಛೆ ಇರದಿದ್ದರೆ ಅಲ್ಲಿಂದ ಹೋಗುವಂತೆ ಹೇಳುತ್ತಾರೆ. ನಂತರ ಮಾತು ಮುಂದುವರಿಸುವ ಅವರು ತಡವಾಗಿ ಆಗಮಿಸಿದ್ದಕ್ಕೆ ಜನರ ಕ್ಷಮೆ ಕೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Feb 17, 2023 12:30 PM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.