ಇಬ್ಬರು ಪ್ರಮುಖ ನಾಯಕರು ನಾಳೆ ಕಾಂಗ್ರೆಸ್ ಸೇರಲಿದ್ದಾರೆ ಅಂತಷ್ಟೇ ಶಿವಕುಮಾರ್ ಹೇಳಿದರು, ಯಾರೂಂತ ಹೇಳಲಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Nov 14, 2023 | 3:57 PM

ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ವರಿಷ್ಠರು ಘೋಷಣೆ ಮಾಡಿದ ಬಳಿಕ ಪಕ್ಷದ ಹಲವಾರು ರಾಜ್ಯ ನಾಯಕರಲ್ಲಿ ಅಸಮಾಧಾನ ಮೂಡಿದೆ. ಸೋಮಣ್ಣ ವಿಧಾನ ಸಭಾ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೇರುವ ದಟ್ಟ ವದಂತಿ ಹರಡಿತ್ತು. ಅವರೇನಾದರೂ? ಅಥವಾ ಬಿಜೆಪಿ ನಾಯಕರನ್ನು ಬಹಿರಂಗವಾಗಿ ಟೀಕಿಸುತ್ತಿರುವ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ಮಧ್ಯಾಹ್ನ ಕೆಪಿಸಿಸಿ ಕಚೇರಿ ಮುಂಬಾಗದಲ್ಲಿ ಒಂದು ಕುತೂಹಲಕಾರಿ ಘೋಷಣೆಯನ್ನು ಮಾಡಿದರು. ಅವರು ಹೇಳಿದ ಸಂಗತಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಶಾಕಿಂಗ್ ಅನಿಸಬಹುದು. ಅವರು ಹೇಳಿದ್ದೇನೆಂದರೆ ನಾಳೆ ಬೆಳಗ್ಗೆ 11:00 ಗಂಟೆಗೆ ಇಬ್ಬರು ಪ್ರಮುಖ ನಾಯಕರು (two prominent leaders) ಕಾಂಗ್ರೆಸ್ ಸೇರಲಿದ್ದಾರಂತೆ, ಅವರಿಗೆ ಸಮಯ ನಿಗದಿಪಡಿಸಲಾಗಿದೆ, ಅವರು ಯಾರು ಅಂತ ಈಗ ಹೇಳಲ್ಲ, ನಾಳೆಯೇ ಎಲ್ಲರಿಗೂ ಗೊತ್ತಾಗಲಿದೆ ಎಂದು ಹೇಳಿದರು. ಈ ಹೇಳಿಕೆಯನ್ನು ನೀಡುವ ಮೂಲಕ ಶಿವಕುಮಾರ್ ಕನ್ನಡಿಗರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾರೆ. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ವರಿಷ್ಠರು ಘೋಷಣೆ ಮಾಡಿದ ಬಳಿಕ ಪಕ್ಷದ ಹಲವಾರು ರಾಜ್ಯ ನಾಯಕರಲ್ಲಿ ಅಸಮಾಧಾನ ಮೂಡಿದೆ.  ವಿ ಸೋಮಣ್ಣ ವಿಧಾನ ಸಭಾ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೇರುವ ದಟ್ಟ ವದಂತಿ ಹರಡಿತ್ತು. ಅವರೇನಾದರೂ? ಅಥವಾ ಬಿಜೆಪಿ ನಾಯಕರನ್ನು ಬಹಿರಂಗವಾಗಿ ಟೀಕಿಸುತ್ತಿರುವ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ? ಗೊತ್ತಿಲ್ಲ ಮಾರಾಯ್ರೇ.

ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದ್ಕೂರ್ ಆಯ್ಕೆಯಾದಾಗಿನಿಂದ ಬಂಡುಕೋರ ಪ್ರವೃತ್ತಿ ಪ್ರದರ್ಶಿಸುತ್ತಿದ್ದಾರೆ. ಅವರು ಅಲ್ಮೋಸ್ಟ್ ಕಾಂಗ್ರೆಸ್ ಸೇರ್ಪಡೆಯಾಗೇ ಬಿಟ್ಟರು ಎಂಬ ವದಂತಿಯೂ ಹರಡಿತ್ತು. ಮೊನ್ನೆ ಹಾಸನದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಅವರು ಹೋಗಿರಲಿಲ್ಲ. ಅವರೇನಾದರೂ? ಖಚಿತವಾಗಿ ಗೊತ್ತಿಲ್ಲ ಮಾರಾಯ್ರೇ. ನಾಳಿನವರೆಗೆ ಕಾಯ್ದರಾಯಿತು ಬಿಡಿ ಸ್ವಾಮಿ, ಎಲ್ಲ ಗೊತ್ತಾಗಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.