ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ, ಕಾವೇರಿ ನೀರು ಉಳಿಸುವ ಯೋಚನೆ ಮಾಡಲಿ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Sep 27, 2023 | 4:10 PM

ತಮ್ಮ ಸಮ್ಮಿಶ್ರ ಸರ್ಕಾರವನ್ನು ಯಾರು ಬೀಳಿಸಿದರು ಅನ್ನೋದು ಈಗಿನ ಪ್ರಶ್ನೆಯಲ್ಲ, ಸರ್ಕಾರ ಉರುಳೋದಿಕ್ಕೆ ಕುಮ್ಮಕ್ಕು ನೀಡಿದ್ದು ಯಾರು ಅಂತಲೂ ತಮಗೆ ಗೊತ್ತಿದೆ, ಆದರೆ ಈಗ ಅದೆಲ್ಲ ಮುಗಿದ ಅಧ್ಯಾಯ, ಅದರ ಬಗ್ಗೆ ಯೋಚಿಸುವುದರಲ್ಲಿ ಅರ್ಥವಿಲ್ಲ, ರಾಜ್ಯದ ಮುಂದಿರುವ ಸಮಸ್ಯೆಯನ್ನು ಸರ್ಕಾರ ಗಮನಿಸಲಿ ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಂದು ಒಟ್ಟಾಗಿ ತಮಿಳುನಾಡುಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಸೌಧದ ಅವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy), ಜಂಟಿಯಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಶುಭವಾಗಲಿ ಅಂತ ಡಿಕೆ ಶಿವಕುಮಾರ್ (DK Shivakumar) ಹೇಳಿರುವುದನ್ನು ತಿಳಿಸಿದಾಗ, ನಮಗೆ ಶುಭವಾಗುತ್ತೋ ಬಿಡುತ್ತೋ ಅದು ಬೇರೆ ವಿಚಾರ, ಮೊದಲು ಕಾವೇರಿಯಿಂದ ಹರಿದುಹೋಗುತ್ತಿರುವ ನೀರು ಉಳಿಸುವ ಪ್ರಯತ್ನವನ್ನು ನೀರಾವರಿ ಸಚಿವ ಮಾಡಲಿ ಎಂದು ತಿವಿದರು. ತಮ್ಮ ಸಮ್ಮಿಶ್ರ ಸರ್ಕಾರವನ್ನು (coalition government) ಯಾರು ಬೀಳಿಸಿದರು ಅನ್ನೋದು ಈಗಿನ ಪ್ರಶ್ನೆಯಲ್ಲ, ಸರ್ಕಾರ ಉರುಳೋದಿಕ್ಕೆ ಕುಮ್ಮಕ್ಕು ನೀಡಿದ್ದು ಯಾರು ಅಂತಲೂ ತಮಗೆ ಗೊತ್ತಿದೆ, ಆದರೆ ಈಗ ಅದೆಲ್ಲ ಮುಗಿದ ಅಧ್ಯಾಯ, ಅದರ ಬಗ್ಗೆ ಯೋಚಿಸುವುದರಲ್ಲಿ ಅರ್ಥವಿಲ್ಲ, ರಾಜ್ಯದ ಮುಂದಿರುವ ಸಮಸ್ಯೆಯನ್ನು ಸರ್ಕಾರ ಗಮನಿಸಲಿ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.