Karnataka Assembly Polls: ಕನಕಪುರಲ್ಲಿ ನಾಮಪತ್ರ ಸಲ್ಲಿಸುವ ಮೊದಲು ಡಿಕೆ ಶಿವಕುಮಾರ್ ದೇವಿ ಕೆಂಕೇರಮ್ಮನಿಗೆ ಪೂಜೆ ಸಲ್ಲಿಸಿ ತಮ್ಮ ತಾಯಿಯ ಪಾದ ಮುಟ್ಟಿದರು

ಅರುಣ್​ ಕುಮಾರ್​ ಬೆಳ್ಳಿ

Updated on: Apr 17, 2023 | 3:14 PM

ಡಿಕೆ ಸುರೇಶ್ ಸಹ ದೇವಿಗೆ ನಮಸ್ಕರಿಸಿ, ತಾಯಿಯ ಪಾದ ಮುಟ್ಟಿ ನಮಸ್ಕರಿದ ಬಳಿಕ ಅಣ್ಣ ಮತ್ತು ಅತ್ತಿಗೆಯವರ ಕಾಲಿಗೂ ವಂದಿಸುತ್ತಾರೆ.

ರಾಮನಗರ: ಡಿಕೆ ಶಿವಕುಮಾರ್ (DK Shivakumar) ಇಂದು ರಾಮನಗರ ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೊದಲು ಕ್ಷೇತ್ರದ ಕೆಂಕೇರಮ್ಮ ದೇವಸ್ಥಾನಲ್ಲಿ (Kenkeramma temple) ಕುಟುಂಬಸಮೇತರಾಗಿ ಪೂಜೆ ಸಲ್ಲಿಸಿದರು. ಪತ್ನಿಯೊಂದಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ತಮ್ಮ ತಾಯಿ ಗೌರಮ್ಮನವರ ಆಶೀರ್ವಾದವನ್ನೂ ಪಡೆದುಕೊಳ್ಳುತ್ತಾರೆ. ಶಿವಕುಮಾರ್ ಜೊತೆ ಆಗಮಿಸಿದ್ದ ಅವರ ಸಹೋದರ ಮತ್ತು ರಾಮನಗರ ಸಂಸದ ಡಿಕೆ ಸುರೇಶ್ (DK Suresh) ಸಹ ದೇವಿಗೆ ನಮಸ್ಕರಿಸಿ, ತಾಯಿಯ ಪಾದ ಮುಟ್ಟಿ ನಮಸ್ಕರಿದ ಬಳಿಕ ಅಣ್ಣ ಮತ್ತು ಅತ್ತಿಗೆಯವರ ಕಾಲಿಗೂ ವಂದಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 17, 2023 03:14 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.