ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ

ಮಹೇಶ್ ಇ, ಭೂಮನಹಳ್ಳಿ Edited By:

Updated on: Jun 10, 2026 | 10:16 PM

ದೆಹಲಿಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಪುಟ ವಿಸ್ತರಣೆ ಕುರಿತು ಮಾತನಾಡಿದ್ದಾರೆ. ಸಾರ್ವಜನಿಕವಾಗಿ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾರೊಂದಿಗೆ ಮಾತನಾಡಬೇಕೋ ಅವರೊಂದಿಗೆ ಮಾತನಾಡಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತನಾಗಿ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ

ದೆಹಲಿ, ಜೂ.10: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಇಂದು (ಜೂ.10) ಕಾಂಗ್ರೆಸ್​​​ ನಾಯಕರನ್ನು ಭೇಟಿಯಾಗಿದ್ದಾರೆ. ನಾಳೆ (ಜೂ.11) ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿಯಾಗಲಿದ್ದಾರೆ. ಇದರ ನಡುವೆ ಅವರು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಆದರೆ ಎಲ್ಲವನ್ನೂ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಯಾರೊಂದಿಗೆ ಮಾತನಾಡಬೇಕೋ, ಏನು ಹೇಳಬೇಕೋ ಆ ಎಲ್ಲ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ. “ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ. ಕಾರ್ಯಕರ್ತನಾಗಿ ಕಾರ್ಯಕರ್ತರಿಗೆ ನ್ಯಾಯ ಕೊಡಿಸುವಂತಹ ಪ್ರಯತ್ನವನ್ನು ಮಾಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಥವಾ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ, ತಾವು ಮಾಡಬೇಕಾದ ಮಾತುಕತೆಗಳನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 10, 2026 10:15 PM
Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...