DK Shivakumar: ಅಧಿಕಾರ, ಇಷ್ಟಾರ್ಥ ಸಿದ್ಧಿಗಾಗಿ ಮಾಡುವ ಚಂಡಿಕಾಯಾಗ ಮಾಡಿಸುತ್ತಿರುವ ಡಿಕೆ ಶಿವಕುಮಾರ್
ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ಡಿಕೆಶಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ. ಉಡುಪಿಯ ಜ್ಯೋತಿಷಿ ದ್ವಾರಕನಾಥ್ ಸಲಹೆಯಂತೆ 15ಕ್ಕೂ ಹೆಚ್ಚು ಪುರೋಹಿತರ ನೇತೃತ್ವದಲ್ಲಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ.
ರಾಜ್ಯ ವಿಧಾನಸಬಾ ಚುನಾವಣೆ ಹೊತ್ತಲ್ಲೇ ಡಿಕೆ ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ಡಿಕೆಶಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ. ಉಡುಪಿಯ ಜ್ಯೋತಿಷಿ ದ್ವಾರಕನಾಥ್ ಸಲಹೆಯಂತೆ 15ಕ್ಕೂ ಹೆಚ್ಚು ಪುರೋಹಿತರ ನೇತೃತ್ವದಲ್ಲಿ ಚಂಡಿಕಾಯಾಗ ಮಾಡಿಸುತ್ತಿದ್ದಾರೆ. ಒಂದೇ ತಿಂಗಳಲ್ಲಿ 2 ಬಾರಿ ಡಿಕೆಶಿ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಅಧಿಕಾರಕ್ಕಾಗಿ ರಾಜರು ಚಂಡಿಕಾಯಾಗ ನಡೆಸುತ್ತಿದ್ದರು. ಈಗ ಸಿಎಂ ಕುರ್ಚಿಗಾಗಿ ಶಕ್ತಿ ಪೀಠದಲ್ಲಿ ಡಿಕೆಶಿ ಯಾಗದ ಮೊರೆ ಹೋಗಿದ್ದಾರೆ. ಅಧಿಕಾರ, ಇಷ್ಟಾರ್ಥ ಸಿದ್ಧಿಗಾಗಿ ಯಾಗ ಮಾಡಲಾಗಿದೆ. ಇನ್ನು 2018ರ ಚುನಾವಣೆಯಲ್ಲಿ ಹೆಚ್ಡಿ ದೇವೇಗೌಡರ ಕುಟುಂಬ ಚಂಡಿಕಾಯಾಗ ಮಾಡಿಸಿತ್ತು. ಸಿಎಂ ಆಗುವ ಮುನ್ನ ಹೆಚ್ಡಿ ಕುಮಾರಸ್ವಾಮಿ ಶಾರದಾಂಬೆ ದರ್ಶನ ಪಡೆದಿದ್ದರು.
Published on: Apr 23, 2023 03:23 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
