ಸಿಎಲ್ಪಿ ಸಭೆಗೂ ಮುನ್ನವೇ ವಿಧಾನಸೌಧದಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ರಾಜಧಾನಿಯ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು (ಮೇ 30) ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆಗೂ ಮುನ್ನವೇಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಬೆಂಗಳೂರು, ಮೇ 30): ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು (ಮೇ 30) ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆಗೂ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು… ರಾಜಕೀಯದ ಪ್ರಮುಖ ನಿರ್ಧಾರಗಳು ಹೊರಬೀಳುವ ಮುನ್ನ ಡಿ.ಕೆ. ಶಿವಕುಮಾರ್ ಅವರು ನೊಣವಿನಕೆರೆ ಅಜ್ಜಯ್ಯ ನೀಡಿದ ಸಲಹೆ ಸೂಚನೆಗಳನ್ನ ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಹೌದು… ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿದ್ದ ಆಪ್ತರು, ಬೆಂಬಲಿಗರು ಹಾಗೂ ಭದ್ರತಾ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಹೊರಗೆ ಕಳುಹಿಸಿ, ಸಂಪೂರ್ಣವಾಗಿ ಏಕಾಂಗಿಯಾಗಿ ಈ ಪೂಜೆಯನ್ನು ನೆರವೇರಿಸಿದರು. ಯಾವುದೇ ಗದ್ದಲವಿಲ್ಲದೆ, ಏಕಾಗ್ರತೆಯಿಂದ ದೇವತಾ ಆರಾಧನೆಯಲ್ಲಿ ತೊಡಗಿಸಿಕೊಳ್ಳಲು ಅವರು ಬಯಸಿದ್ದರಿಂದ ಕೊಠಡಿಯ ಬಾಗಿಲು ಮುಚ್ಚಿ ರಹಸ್ಯವಾಗಿ ಪ್ರಾರ್ಥನೆ ಸಲ್ಲಿಸಿದರು.
Follow Us
