Karnataka Assembly Polls: ಹೈಕಮಾಂಡ್ ಒಲವು ನಿಮ್ಮ ಪರ ಇದೆಯಾ ಅಂತ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೇಗೆ ವರ್ತಿಸಿದರು ಅಂತ ನೋಡಿ!

ಅರುಣ್​ ಕುಮಾರ್​ ಬೆಳ್ಳಿ

Updated on: May 14, 2023 | 10:53 AM

ಪತ್ರಕರ್ತರು ಅವರಿಗೆ, ‘ಸರ್, ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ ಒಲವು ನಿಮ್ಮ ಪರ ಇದೆಯಾ?’ ಅಂತ ಕೇಳಿದಾಗ ಮೌನವಾಗಿ ಅಲ್ಲಿಂದ ಜಾರಿಕೊಳ್ಳುತ್ತಾರೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನಿಸ್ಸಂದೇಹವಾಗಿ ಮಹಾಯುದ್ಧ ಗೆದ್ದಿದ್ದಾರೆ. ನಿಮಗೆ ನೆನಪಿರಬಹುದು, ಚುನಾವಣಾ ಪ್ರಚಾರದಲ್ಲಿದ್ದಾಗ ಅವರು ಕಾಂಗ್ರೆಸ್ ಗೆ (Congress) 141 ಸೀಟು ಬರುತ್ತವೆ ಎಂದು ಹೇಳುತ್ತಿದ್ದರು. ಆ ಸಂಖ್ಯೆ ಅವರು ಹೇಗೆ ಕಂಡುಕೊಂಡರೋ ಗೊತ್ತಿಲ್ಲ. ಕಾಂಗ್ರೆಸ್ ಗೆ 141 ಸೀಟು ಬರಲಿಲ್ಲವಾದರೂ ಅದರ ಹತ್ತಿರಕ್ಕೆ (136) ಪಕ್ಷದ ಟ್ಯಾಲಿ ಬಂತು. ಇವತ್ತು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಅವರು, ತಾನು 136 ಹೇಳಿದ್ದು ಅನ್ನುತ್ತಿದ್ದಾರೆ. ಬಿಡಿ, ಅದೇನೂ ಚರ್ಚೆಯ ವಿಷಯವಲ್ಲ, ಆದರೆ, ಪತ್ರಕರ್ತರು ಅವರಿಗೆ, ‘ಸರ್, ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ (high command) ಒಲವು ನಿಮ್ಮ ಪರ ಇದೆಯಾ?’ ಅಂತ ಕೇಳಿದಾಗ ಮೌನವಾಗಿ ಅಲ್ಲಿಂದ ಜಾರಿಕೊಳ್ಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.