ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗಾಗಿ ಶಿವಕುಮಾರ್ ಬಹಳ ಶ್ರಮಿಸುತ್ತಿದ್ದಾರೆ: ರಘುನಂದನ್ ರಾಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Oct 29, 2024 | 7:08 PM

ಮುನಿಸಿಕೊಂಡಿರುವ ರಾಮಣ್ಣ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಸೋಲಿಗೆ ಕಾರಣರಾಗುತ್ತಾರೆ ಎಂಬ ಮಾತು ಕ್ಷೇತ್ರದಲ್ಲಿ ತೇಲಾಡುತ್ತಿದೆ. ಆದರೆ ಯೋಗೇಶ್ವರ್ ತನ್ನಿಂದಲೇ ಗೆಲ್ಲೋದು, ಶಿವಕುಮಾರ್ ಜೊತೆ ಯೋಗೇಶ್ವರ್ ಸಹ ತನ್ನ ನಾಯಕ ಎನ್ನುವ ರಾಮಣ್ಣ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಡಿಕೆ ಸುರೇಶ್ ಅವರ ವೋಟ್ ಶೇರನ್ನು 15 ಸಾವಿರದಿಂದ 87 ಸಾವಿರಕ್ಕೆ ಹೆಚ್ಚಿಸಿದನ್ನು ವಿವರಿಸುತ್ತಾರೆ.

ರಾಮನಗರ: ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಟಿಕೆಟ್ ಗಿಟ್ಟಿಸದೆ ಹೋಗಿದ್ದರೆ ಈ ಅಜಾನುಬಾಹು ವ್ಯಕ್ತಿ ರಘುನಂದನ್ ರಾಮಣ್ಣ ಪಕ್ಷದ ಅಭ್ಯರ್ಥಿಯಾಗಿರುತ್ತಿದ್ದರು. ಇವರ ನಾಮಪತ್ರವನ್ನೂ ಡಿಕೆ ಶಿವಕುಮಾರ್ ಅವರ ಅಕೌಂಟಟ್ ರೆಡಿ ಮಾಡಿದ್ದರಂತೆ. ನಮ್ಮ ರಾಮನಗರ ವರದಿಗಾರನೊಂದಿಗೆ ರಾಮಣ್ಣ ಮುಕ್ತವಾಗಿ ಮತ್ತು ನಿರರ್ಗಳವಾಗಿ ಮಾತಾಡಿದ್ದಾರೆ. ಟಿಕೆಟ್ ಮಿಸ್ ಆಗಿದ್ದಕ್ಕೆ ಅಸಮಾಧಾನ ಉಂಟಾಗಿದ್ದು ನಿಜವಾದರೂ ಈಗ ಅದು ತಿಳಿಯಾಗಿದೆ ಎನ್ನುತ್ತಾರೆ ರಾಮಣ್ಣ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​​ನಿಂದ ಮತ್ತೆ ಬಿಗ್ ಆಪರೇಷನ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.