ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಹಳೆಯ ದಿನ ನೆನಪಿಸಿಕೊಂಡ ಡಿಕೆಶಿ

Edited By:

Updated on: Aug 02, 2026 | 11:03 PM

ವೀರಶೈವ ಧರ್ಮದ ಕುರಿತಾದ ಹಳೆಯ ವಿವಾದವನ್ನು ನೆನಪಿಸಿಕೊಂಡ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಗ ಸೃಷ್ಟಿಯಾದ ಪರಿಸ್ಥಿತಿಯಿಂದ ಸಾರ್ವಜನಿಕರು ಸಿಟ್ಟಾಗಿದ್ದರು. ಆದ್ದರಿಂದ, ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ಹೋಗಿ ಶ್ರೀಗಳ ಕ್ಷಮೆ ಕೇಳಿದ್ದೆವು ಎಂದು ತಿಳಿಸಿದರು. ಟೀಕೆಗಳು ಕ್ಷಣಿಕ, ಆದರೆ ಸಾಧನೆಗಳು ಶಾಶ್ವತ ಎಂದ ಅವರು, ವಿರೋಧಿಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಬೆಂಗಳೂರು, ಆಗಸ್ಟ್​​ 02: ‘ಈ ಹಿಂದೆ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ನಿರ್ಧಾರದಿಂದ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾಗ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳಿ ಪಕ್ಷದ ಪರವಾಗಿ ಶ್ರೀಗಳ ಪಾದಕ್ಕೆ ಬಿದ್ದು ಕ್ಷಮೆ ಯಾಚಿಸಿದ್ದಾಗಿ’ ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದಾರೆ. ಬೆಂಗಳೂರಲ್ಲಿ ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ‘ಆಗ ಅನೇಕ ಟೀಕೆಗಳು ವ್ಯಕ್ತವಾಗಿದ್ದರೂ, ಆ ಟೀಕೆಗಳೆಲ್ಲವೂ ಕಾಲಾನಂತರದಲ್ಲಿ ಮರೆಯಾಗಿ, ನಮ್ಮ ಕೆಲಸಗಳು ಮಾತ್ರ ಉಳಿದುಕೊಂಡಿವೆ. ಟೀಕೆಗಳು ಸಾಯುತ್ತವೆ, ನಮ್ಮ ಸಾಧನೆಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ. ತಾವು ಅಂದು ಕ್ಷಮೆ ಕೇಳಿದ್ದು ಸತ್ಯ ಎಂಬುದನ್ನು ಇಂದು ವಿರೋಧಿಗಳು ಕೂಡ ಒಪ್ಪಿಕೊಂಡಿದ್ದಾರೆ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶವಿಲ್ಲದೆ ಬದುಕಿದರೆ ಬದುಕಿಗೇ ಅವಮಾನ ಎಂದು ಮಾರ್ಮಿಕವಾಗಿ ನುಡಿದ ಡಿ.ಕೆ. ಶಿವಕುಮಾರ್, ವಿಪಕ್ಷಗಳು ದಿನನಿತ್ಯ ಮಾಡುವ ಟೀಕೆಗಳಿಗೆ ತಾವು ತಲೆಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us