ಡಿಕೆ ಶಿವಕುಮಾರ್​ಗೆ 16 ಲಕ್ಷ ರೂ. ಮೌಲ್ಯದ ಭರ್ಜರಿ ಗಿಫ್ಟ್: ಅಂಥದ್ದೇನಿದೆ ಇದರಲ್ಲಿ? ಇಲ್ಲಿದೆ ನೋಡಿ

Edited By:

Updated on: Dec 29, 2025 | 8:59 AM

ಕಾರವಾರದಲ್ಲಿ ನಡೆದ ‘ಕರಾವಳಿ ಉತ್ಸವ’ದಲ್ಲಿ ಭಾನುವಾರ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅಪರೂಪದ ಉಡುಗೊರೆಯೊಂದನ್ನು ನೀಡಿದ್ದಾರೆ. ವಿಷ್ಣುವಿನ ವಿಶ್ವರೂಪ ದರ್ಶನದ ಶ್ರೀಗಂಧದಿಂದ ತಯಾರಿಸಿದ ಕಲಾಕೃತಿ ನೀಡಿದ್ದಾರೆ. ಇದು 16 ಲಕ್ಷ ರೂ. ಮೌಲ್ಯದ್ದಾಗಿದೆ. ಕಲಾಕೃತಿಯ ವಿಡಿಯೋ ಇಲ್ಲಿದೆ ನೋಡಿ.

ಕಾರವಾರ, ಡಿಸೆಂಬರ್ 29: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ‘ಕರಾವಳಿ ಉತ್ಸವ’ದಲ್ಲಿ ಭಾಗವಹಿಸಿದ ಡಿಸಿಎಂ ಡಿಕೆ ಶಿವಕುಮಾರ್​ಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಭರ್ಜರಿ ಉಡುಗೊರೆ ನೀಡಿದ್ದಾರೆ. 16 ಲಕ್ಷ ರೂ. ಮೌಲ್ಯದ ಶ್ರೀಗಂಧದಿಂದ ತಯಾರಿಸಿದ ಭಗವಾನ್ ವಿಷ್ಣುವಿನ ವಿಶ್ವರೂಪ ದರ್ಶನದ ಕಲಾಕೃತಿ ನೀಡಿದ್ದಾರೆ. ಇದೇ ವೇಳೆ, ಡಿಕೆ ಶಿವಕುಮಾರ್ ಅವರ ಮನಸ್ಸಿನಲ್ಲಿರುವ ಎಲ್ಲಾ ಬಯಕೆಗಳು ಈಡೇರಲೆಂದು ಆಶಿಸುವೆ. ನಮಗೆ ಕೊಟ್ಟ ಆಶ್ವಾಸನೆ ಆದಷ್ಟು ಬೇಗ ಈಡೇರಿಸುವಂತಾಗಲೆಂದು ಹಾರೈಸಿ ಈ ಉಡುಗೊರೆ ನೀಡುತ್ತಿದ್ದೇನೆ ಎಂದು ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More