ಪ್ರಜ್ವಲ್ ರೇವಣ್ಣ ಪ್ರಕರಣ; ನೂರಾರು ಮಹಿಳೆಯರ ಗೌರವಕ್ಕೆ ಚ್ಯುತಿ ತಂದಿರುವ ಶಿವಕುಮಾರ್ ರಾಜೀನಾಮೆ ನೀಡಬೇಕು: ಯೋಗೇಶ್ವರ್
ಶಿವಕುಮಾರ್ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದರೂ, ಮಾದರಿಯೆನಿಸುವ ಆಡಳಿತ ನಡೆಸದೆ ಅಡ್ಡದಾರಿ ಹಿಡಿದಿದ್ದಾರೆ. ಹಿಂದೆ ಅವರು ನಡೆಸಿದ ಅಡ್ಡ ಕಸುಬುಗಳು ಸಾಬೀತಾಗಿವೆ. ಈಗ ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಅವರು ಹುದ್ದೆಯ ಘನತೆಗೆ ತಕ್ಕಂತೆ ವರ್ತಿಸದೆ, ಹೆಚ್ ಡಿ ದೇವೇಗೌಡರ ಕುಟುಂಬವನ್ನು ತೇಜೋವಧೆ ಮಾಡುವ ಮತ್ತು ಅವರ ಪಕ್ಷವನ್ನು ಮಟ್ಟಹಾಕುವ ಕೆಲಸದಲ್ಲಿ ತೊಡಗಿದ್ದಾರೆ ಎಂದು ಯೋಗೇಶ್ವರ್ ಹೇಳಿದರು,
ರಾಮನಗರ: ಅಶ್ಲೀಲ ವಿಡಿಯೋಗಳನ್ನು ಬಹಿರಂಗ ಮಾಡುವಲ್ಲಿ ನೇರವಾಗಿ ಭಾಗಿಯಾಗಿರುವ ಡಿಕೆ ಶಿವಕುಮಾರ್ (DK Shivakumar) ತಾವು ನಿರ್ವಹಿಸುತ್ತಿರುವ ಹುದ್ದೆಗೆ ಕಳಂಕ ತಂದಿದ್ದಾರೆ, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪಕ್ಷದ ಜಿಲ್ಲಾ ಮುಖಂಡರು ಇವತ್ತು ಪ್ರತಿಭಟನೆ ನಡೆಸಿದ್ದಾಗಿ ಹಿರಿಯ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ (CP Yogeshwar) ಹೇಳಿದರು. ಪ್ರತಿಭಟನೆ ಮಾಡುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತನಿಖೆ ನಡೀತಾ ಇದೆ, ಅಶ್ಲೀಲ ವಿಡಿಯೋಗಳು (Sleaze videos) ಪ್ರಜ್ವಲ್ ರೇವಣ್ಣನ ಖಾಸಗಿ ವಿಚಾರ ಅದರ ಬಗ್ಗೆ ಕಾಮೆಂಟ್ ಮಾಡಲ್ಲ, ಅದರೆ ವಿಡಿಯೋಗಳಿಂದಾಗಿ ನೂರಾರು ಮಹಿಳೆಯ ಗೌರವ ಮಣ್ಣುಪಾಲಾಯಿತಲ್ಲ? ಶಿವಕುಮಾರ್ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದರೂ, ಮಾದರಿಯೆನಿಸುವ ಆಡಳಿತ ನಡೆಸದೆ ಅಡ್ಡದಾರಿ ಹಿಡಿದಿದ್ದಾರೆ. ಹಿಂದೆ ಅವರು ನಡೆಸಿದ ಅಡ್ಡ ಕಸುಬುಗಳು ಸಾಬೀತಾಗಿವೆ. ಈಗ ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಅವರು ಹುದ್ದೆಯ ಘನತೆಗೆ ತಕ್ಕಂತೆ ವರ್ತಿಸದೆ, ಹೆಚ್ ಡಿ ದೇವೇಗೌಡರ ಕುಟುಂಬವನ್ನು ತೇಜೋವಧೆ ಮಾಡುವ ಮತ್ತು ಅವರ ಪಕ್ಷವನ್ನು ಮಟ್ಟಹಾಕುವ ಕೆಲಸದಲ್ಲಿ ತೊಡಗಿದ್ದಾರೆ, ಅವರು ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಯೋಗೇಶ್ವರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನನ್ನ ಮತ್ತು ಕುಮಾರಸ್ವಾಮಿ ನಡುವೆ ರಾಜಕೀಯ ವೈಷಮ್ಯವಿರಲಿಲ್ಲ; ಬೇರೆ ಬೇರೆ ಪಕ್ಷಗಳಲ್ಲಿದ್ದೆವು, ಅಷ್ಟೇ: ಸಿಪಿ ಯೋಗೇಶ್ವರ್
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

