ಸುದೀಪ್ ಭೇಟಿ ಮಾಡಿದ್ದು ಪರ್ಸನಲ್ ಕಾರಣಕ್ಕೆ: ಅಸಲಿ ವಿಷಯ ತಿಳಿಸಿದ ಡಿಕೆಶಿ

Updated on: Feb 06, 2025 | 4:30 PM

ಡಿ.ಕೆ. ಶಿವಕುಮಾರ್​ ಅವರನ್ನು ಸುದೀಪ್ ಭೇಟಿ ಮಾಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಭೇಟಿಯ ಉದ್ದೇಶ ಏನು ಎಂಬುದನ್ನು ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ. ರಾಜಕೀಯದ ಕಾರಣಕ್ಕೆ ಭೇಟಿ ನಡೆದಿಲ್ಲ. ಸಿನಿಮಾದ ಶೂಟಿಂಗ್​ ಲೊಕೇಷನ್​ಗೆ ಸಂಬಂಧಿಸಿದ ವಿಚಾರವನ್ನು ಮಾತನಾಡಲು ಸುದೀಪ್ ಅವರು ಬಂದಿದ್ದರು.

ನಟ ಕಿಚ್ಚ ಸುದೀಪ್ ಅವರು ಇಂದು (ಫೆಬ್ರವರಿ 6) ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರನ್ನು ಭೇಟಿ ಆಗಿದ್ದಾರೆ. ಈ ಭೇಟಿಯ ಹಿಂದಿರುವ ಕಾರಣ ಏನು ಎಂಬುದಕ್ಕೆ ಡಿಕೆಶಿ ಉತ್ತರ ನೀಡಿದ್ದಾರೆ. ‘ಸುದೀಪ್ ಅವರದ್ದು ಏನೋ ಸ್ವಲ್ಪ ಪರ್ಸನಲ್ ವಿಚಾರಗಳು ಇರುತ್ತವೆ. ಶೂಟಿಂಗ್ ಜಾಗದ ಸಲುವಾಗಿ ಬಂದು ಕೇಳಿದ್ದಾರೆ. ಅದನ್ನು ಹೊರತುಪಡಿಸಿ ಬೇರೆ ಏನೂ ಇಲ್ಲ. ರಾಜಕೀಯದ ಭೇಟಿ ಅಲ್ಲ. ಸ್ನೇಹಿತನಾಗಿ ಬಂದು ಭೇಟಿ ಮಾಡಿದ್ದಾರೆ’ ಎಂದು ಡಿಕೆ ಶಿವಕುಮಾರ್​ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More