AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಡಿಕೆ ಶಿವಕುಮಾರ್ : ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು, ನೀರು

ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಡಿಕೆ ಶಿವಕುಮಾರ್ : ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು, ನೀರು

ರಮೇಶ್ ಬಿ. ಜವಳಗೇರಾ
|

Updated on:Jun 20, 2026 | 3:58 PM

Share

ರಾಜ್ಯದ ಜನರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ (Electricity Connection) ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್‌ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹಳೆಯ ಕಟ್ಟಡಗಳು ತಾತ್ಕಾಲಿಕ ಸಂಪರ್ಕ ಹೊಂದಿದ್ದರೇ, ಅಂತಹ ಕಟ್ಟಡಗಳಿಗೆ ಆದೇಶ ಪ್ರಕಟವಾದ ದಿನದಿಂದ 15 ದಿನಗಳ ಒಳಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಇನ್ನು ಖಾಲಿ ಇರುವ ನಿವೇಶನಕ್ಕೆ ಒಸಿ, ಸಿಸಿ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.

ಬೆಂಗಳೂರು, (ಜೂನ್ 20): ರಾಜ್ಯದ ಜನರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ (Electricity Connection) ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್‌ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹಳೆಯ 2000ರ ಮೇ 31 ರ ಒಳಗೆ ಕಟ್ಟಡ ಪೂರ್ಣಗೊಂಡು ತಾತ್ಕಾಲಿಕ ಸಂಪರ್ಕ ಹೊಂದಿದ್ದರೇ, ಅಂತಹ ಕಟ್ಟಡಗಳಿಗೆ ಆದೇಶ ಪ್ರಕಟವಾದ ದಿನದಿಂದ 15 ದಿನಗಳ ಒಳಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಏನೇನು ದಾಖಲೆ ನೀಡಬೇಕು?

ಅರ್ಜಿ ಸಲ್ಲಿಸುವವರು ಫಲಾನುಭವಿಗಳ ಫೋಟೋ, ಕಟ್ಟಡದ ಫೋಟೋ ಹಾಗೂ ಜಿಪಿಎಸ್‌ ಲೊಕೆಷನ್‌ ಜೊತೆಗೆ ಅರ್ಜಿ ಸಲ್ಲಿಸಬೇಕು. 31-05-2000 ನೇ ಇಸವಿಯೊಳಗೆ ಪೂರ್ಣಗೊಂಡ ಕಟ್ಟಡಗಳಿಗೆ ಮಾತ್ರ ಈ ಅವಕಾಶ ಇರಲಿದೆ. ಹೊಸದಾಗಿ ತರಾತುರಿಯಲ್ಲಿ ಕಟ್ಟಡ ಕಟ್ಟೋರಿಗೆ ಈ ರಿಯಾಯಿತಿ ಇರೋದಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ರೈತರಿಗೆ ರೇಷ್ಮೆ ಹುಳು ಮನೆ, ಕೊಟ್ಟಿಗೆ, ಹೈನುಗಾರಿಕೆಗೆ ವಿನಾಯಿತಿ ನೀಡಲಾಗಿರುತ್ತದೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Jun 20, 2026 03:55 PM

Follow Us