Bengaluru News: ಸಿಂಗಪೂರದಲ್ಲಿ ಕುಳಿತು ಕುಮಾರಸ್ವಾಮಿ ನಡೆಸುತ್ತಿರುವ ತಂತ್ರಗಾರಿಕೆ ಬಗ್ಗೆ ಮಾಹಿತಿ ಇದೆಯೆಂದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 24, 2023 | 3:17 PM

ಸರ್ಕಾರ ಉರುಳಿಸುವ ತಂತ್ರಗಾರಿಕೆ ಒಂದು ಬಹಳ ಗಂಭೀರವಾದ ಸಂಗತಿಯಾದರೂ ಶಿವಕುಮಾರ್ ಅಷ್ಟೇ ಕೂಲಾಗಿ ಪ್ರತಿಕ್ರಿಯಿಸಿದ್ದು ಸುದ್ದಿಗಾರರಲ್ಲಿ ಆಶ್ಚರ್ಯ ಮೂಡಿಸಿತು.

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸಿಂಗಪೂರ್ ನಲ್ಲಿ (Singapore) ಕುಳಿತು ರಾಜ್ಯದಲ್ಲಿ ಕಳೆದರೆಡು ತಿಂಗಳುಗಳಿಂದ ಅಸ್ತಿತ್ವದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರನ್ನು ಉರುಳಿಸುವ ತಂತ್ರ ಹೆಣೆಯುತ್ತಿದ್ದಾರೆಂಬ ವದಂತಿಯೊಂದು ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿ ಎಷ್ಟು ನಿಜಾಂಶವಿದೆ ಅಂತ ಸುದ್ದಿ ಹರಡಿದವರೇ ಹೇಳಬೇಕು. ವಿಷಯದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ, ಬೆಂಗಳೂರಲ್ಲಿ ಮಾಡಬೇಕಿದ್ದ ಕೆಲಸವನ್ನು ಅವರು ಸಿಂಗಪೂರ್ ನಲ್ಲಿ ಕೂತು ಮಾಡುತ್ತಿದ್ದಾರೆ, ತಮಗೆ ಅದರ ಬಗ್ಗೆ ಮಾಹಿತಿ ಇದೆ ಎಂದು ಹೇಳಿದರು. ಸರ್ಕಾರ ಉರುಳಿಸುವ ತಂತ್ರಗಾರಿಕೆ ಒಂದು ಬಹಳ ಗಂಭೀರವಾದ ಸಂಗತಿಯಾದರೂ ಶಿವಕುಮಾರ್ ಅಷ್ಟೇ ಕೂಲಾಗಿ ಪ್ರತಿಕ್ರಿಯಿಸಿದ್ದು ಸುದ್ದಿಗಾರರಲ್ಲಿ ಆಶ್ಚರ್ಯ ಮೂಡಿಸಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.