ರಾಮನಗರ: ಡಿಕೆ ಶಿವಕುಮಾರ್ (DK Shivakumar) ತಮ್ಮ ಹುಟ್ಟೂರು ದೊಡ್ಡಲಹಳ್ಳಿಯಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ತೆರಳಿ ಮತ ಚಲಾಯಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ತಮ್ಮೂರಿನ ಬಗ್ಗೆ ಬಹಳ ಹೆಮ್ಮೆಯಿಂದ ಮಾತಾಡಿದರು. ರಾಜ್ಯದೆಲ್ಲೆಡೆ ಮತದಾನದ (voting) ಸಂಭ್ರಮ ನಡೆಯುತ್ತಿದೆ, ಬದಲಾವಣೆಯ ಗಾಳಿ ಬೀಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಕಾಂಗ್ರೆಸ್ ಪಕ್ಷ ಇತರ ಪಕ್ಷಗಳಂತೆ ಕೇವಲ ಭರವಸೆ ನೀಡುವ ಪಕ್ಷವಲ್ಲ, ನೀಡಿದ ಭರವಸೆಗಳನ್ನು ಈಡೇರಿಸುವ ಪಕ್ಷ. ಪಕ್ಷದ ಚಿಹ್ನೆ ಹಸ್ತದಲ್ಲಿರುವ 5 ಬೆರಳುಗಳ ಸೂಚಕವಾಗಿ 5 ಗ್ಯಾರಂಟಿಗಳನ್ನು (guarantees) ನೀಡಿದ್ದೇವೆ, ಅವುಗಳನ್ನ ಈಡೇರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು. ರಾಜ್ಯದ ಮತದಾರರು ತಮ್ಮ ವಿವೇಕ, ವಿವೇಚನೆ ಮತ್ತು ಜ್ಞಾನ ಬಳಸಿ ಭ್ರಷ್ಟ ಸರ್ಕಾರವನ್ನು ಹೊಡೆದೋಡಿಸುವ ಪವಿತ್ರ ದಿನ ಇದಾಗಿದೆ ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ