AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಯನ್ನು ಧರ್ಮಯುದ್ಧಕ್ಕೆ ಹೋಲಿಸಿದ ಶಿವಕುಮಾರ್ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದರು!

ಲೋಕಸಭಾ ಚುನಾವಣೆಯನ್ನು ಧರ್ಮಯುದ್ಧಕ್ಕೆ ಹೋಲಿಸಿದ ಶಿವಕುಮಾರ್ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದರು!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 26, 2024 | 12:46 PM

Share

ಮಹತ್ವದ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೊದಲು ಶಿವಕುಮಾರ್ ತಮ್ಮ ಇಷ್ಟದೇವರ ಮೊರೆಹೋಗುವ ಹಲವು ವಿಡಿಯೋಗಳನ್ನು ನಾವು ಆಗಾಗ ಬಿತ್ತರಿಸಿದ್ದೇವೆ. ಮಹಾನ್ ದೈವಭಕ್ತರಾಗಿರುವ ಶಿವಕುಮಾರ್ ಲೋಕಸಭಾ ಚುನಾವಣೆಯನ್ನು ಧರ್ಮಯುದ್ಧಕ್ಕೆ ಹೋಲಿಸುತ್ತಾರೆ

ಧರ್ಮಸ್ಥಳ: ರಾಜ್ಯದ ಉಪಮುಖ್ಯಮಂತ್ರಿ (deputy chief minister) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಇಂದು ಧರ್ಮಸ್ಥಳದ ಮಂಜುನಾಥನಿಗೆ (Manjunath) ಪೂಜೆ ಸಲ್ಲಿಸಿದರು. ಮಂಜುನಾಥನ ಸನ್ನಿಧಿಯಿಂದ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಧರ್ಮಯುದ್ದಕ್ಕೆ ಇಳಿಯುವ ಮೊದಲು ಧರ್ಮಸ್ಥಳ ಮಂಜನಾಥನ ದರ್ಶನ ಪಡೆದಿರುವುದಾಗಿ ಹೇಳಿದರು. ಮಾತು ಬಿಡದ ಮಂಜನಾಥ ಮತ್ತು ಕಾಸ ಬಿಡದ ತಿಮ್ಮಪ್ಪ ಅನ್ನುವ ಮಾತಿದೆ ಎಂದ ಶಿವಕುಮಾರ್ ತಮಗೆ ಮಂಜುನಾಥ, ಈಶ್ವರ ಮತ್ತು ಗಂಗಾಧರಜ್ಜನ ರಕ್ಷಣೆ ಸದಾ ಇದೆ ಎಂದು ಹೇಳಿದರು. ಮಹತ್ವದ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೊದಲು ಶಿವಕುಮಾರ್ ತಮ್ಮ ಇಷ್ಟದೇವರ ಮೊರೆಹೋಗುವ ಹಲವು ವಿಡಿಯೋಗಳನ್ನು ನಾವು ಆಗಾಗ ಬಿತ್ತರಿಸಿದ್ದೇವೆ. ಮಹಾನ್ ದೈವಭಕ್ತರಾಗಿರುವ ಶಿವಕುಮಾರ್ ಲೋಕಸಭಾ ಚುನಾವಣೆಯನ್ನು ಧರ್ಮಯುದ್ಧಕ್ಕೆ ಹೋಲಿಸುತ್ತಾರೆ. ಧರ್ಮಯುದ್ದಕ್ಕೆ ಅಣಿಯಾಗುವ ಮೊದಲು ಮಂಜುನಾಥ, ಅಣ್ಣಪ್ಪಸ್ವಾಮಿಯ ದರ್ಶನಕ್ಕೆ ತೆರಳಿ, ಆಶೀರ್ವಾದ ಪಡೆಯುವುದು ತಾನು ಅನುಸರಿಸಿಕೊಂಡು ಬಂದಿರುವ ಪರಂಪರೆ ಮತ್ತು ಪದ್ಧತಿ ಎಂದು ಶಿವಕುಮಾರ್ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಹೃದಯಾಘಾತದಿಂದ ಶಿವರಾತ್ರಿಯಂದೇ ಶಿವೈಕ್ಯಳಾದ ಧರ್ಮಸ್ಥಳದ ಆನೆ ಲತಾ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.