AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ಇಂದು ಬಿಡುಗಡೆ ಮಾಡಿರುವ ವಿಡಿಯೋಗೆ ಶಿವಕುಮಾರ್ ನೀರಸ ಪ್ರತಿಕ್ರಿಯೆ!

ಪ್ರಜ್ವಲ್ ರೇವಣ್ಣ ಇಂದು ಬಿಡುಗಡೆ ಮಾಡಿರುವ ವಿಡಿಯೋಗೆ ಶಿವಕುಮಾರ್ ನೀರಸ ಪ್ರತಿಕ್ರಿಯೆ!

ಅರುಣ್​ ಕುಮಾರ್​ ಬೆಳ್ಳಿ
|

Updated on: May 27, 2024 | 7:11 PM

Share

ತನ್ನ ವಿಡಿಯೋದಲ್ಲಿ ಪಜ್ವಲ್, ನನ್ನ ವಿರುದ್ಧ ಪಿತೂರಿ ನಡೆದಿದೆ, ಷಡ್ಯಂತ್ರವೊಂದಕ್ಕೆ ತಾನು ಬಲಿಯಾಗಿದ್ದೇನೆ ಅಂತ ಹೇಳಿರುವುದಕ್ಕೆ ಪ್ರತಿಕ್ರಯಿಸಿದ ಶಿವಕುಮಾರ್, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ಮಾತಾಡುವವರ ಬಾಯಿಗೆ ಬೀಗ ಹಾಕಲಾಗುತ್ತಾ ಅಂತ ಹೇಳಿದರು. ರಾಹುಲ್ ಗಾಂಧಿಯ ಹೆಸರು ಸಹ ಪ್ರಜ್ವಲ್ ಪ್ರಸ್ತಾಪ ಮಾಡಿದ್ದಾರೆ ಎಂದಾಗ ಶಿವಕುಮಾರ್ ಎಲ್ಲಾದಕ್ಕೂ ಕಾಲವೇ ಉತ್ತರ ನೀಡಲಿದೆ ಎಂದರು.

ಬೆಂಗಳೂರು: ಮೇ 31 ರಂದು ವಾಪಸ್ಸು ಬೆಂಗಳೂರಿಗೆ ವಾಪಸ್ಸು ಬಂದು ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಹೇಳಿರುವ ಪ್ರಜ್ವಲ್ ರೇವಣ್ಣನ (Prajwal Revanna) ವಿಡಿಯೋ ರಾಜ್ಯದಲ್ಲಿ ಚರ್ಚೆಯ ವಿಷಯವಾಗಿದೆ. ಏಪ್ರಿಲ್ 26 ರಿಂದ ತಲೆಮರೆಸಿಕೊಂಡಿರುವ ಪ್ರಜ್ವಲ್ ಯಾವುದೋ ದೇಶದಲ್ಲಿ ಕುಳಿತು ಬಿಡುಗಡೆ ಮಾಡಿರುವ ವಿಡಿಯೋ (video) ಬಗ್ಗೆ ಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪ್ರಜ್ವಲ್ ಬಿಡುಗಡೆ ವಿಡಿಯೋಗೆ ಹೆಚ್ಚಿನ ಮಹತ್ವವೇನೂ ನೀಡಲಿಲ್ಲ. ತನ್ನ ವಿಡಿಯೋದಲ್ಲಿ ಪಜ್ವಲ್, ನನ್ನ ವಿರುದ್ಧ ಪಿತೂರಿ ನಡೆದಿದೆ, ಷಡ್ಯಂತ್ರವೊಂದಕ್ಕೆ ತಾನು ಬಲಿಯಾಗಿದ್ದೇನೆ ಅಂತ ಹೇಳಿರುವುದಕ್ಕೆ ಪ್ರತಿಕ್ರಯಿಸಿದ ಶಿವಕುಮಾರ್, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ಮಾತಾಡುವವರ ಬಾಯಿಗೆ ಬೀಗ ಹಾಕಲಾಗುತ್ತಾ ಅಂತ ಹೇಳಿದರು. ರಾಹುಲ್ ಗಾಂಧಿಯ ಹೆಸರು ಸಹ ಪ್ರಜ್ವಲ್ ಪ್ರಸ್ತಾಪ ಮಾಡಿದ್ದಾರೆ ಎಂದಾಗ ಶಿವಕುಮಾರ್ ಎಲ್ಲಾದಕ್ಕೂ ಕಾಲವೇ ಉತ್ತರ ನೀಡಲಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಶಕ್ತಿ ಯೋಜನೆಯನ್ನು ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಕೊಂಡಾಡಿದರು: ಡಿಕೆ ಶಿವಕುಮಾರ್