Mandya: ಪ್ರಜಾಧ್ವನಿ ಯಾತ್ರೆ ಸಭೆಯಲ್ಲಿ ಕುಡಿದು ಗಲಾಟೆ ಮಾಡುತ್ತಿದ್ದ ವ್ಯಕ್ತಿಗೆ ಎದ್ಹೋಗ್ ಇಲ್ಲಿಂದ ಅಂತ ಗದರಿದ ಡಿಕೆ ಶಿವಕುಮಾರ್
ಪ್ರಜಾಧ್ವನಿ ಯಾತ್ರೆಯ ಭಾಗವಾಗಿ ಇಂದು ನಗರದಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಶಿವಕುಮಾರ ಭಾಷಣ ಮಾಡುವಾಗ ಸಭಿಕರಲ್ಲಿ ಒಬ್ಬ ವ್ಯಕ್ತಿ ಸುಖಾಸುಮ್ಮನೆ ಕಾಂಗ್ರೆಸ್ ಗೆ ಜೈ ಶಿವಕುಮಾರ್ಗೆ ಜೈ ಅಂತ ಕೂಗುತ್ತಿದ್ದ.
ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗಾಗ ಸಾರ್ವಜನಿಕವಾಗಿಯೂ ಕೋಪ ಮಾಡಿಕೊಳ್ಳುತ್ತಾರೆ. ಅಂಥದೊಂದು ಪ್ರಸಂಗ ಇಂದು ಮಂಡ್ಯದಲ್ಲಿ (Mandya) ನಡೆಯಿತು. ಪ್ರಜಾಧ್ವನಿ ಯಾತ್ರೆಯ (Prajadhavni Yatre) ಭಾಗವಾಗಿ ಇಂದು ನಗರದಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಶಿವಕುಮಾರ ಭಾಷಣ ಮಾಡುವಾಗ ಸಭಿಕರಲ್ಲಿ ಒಬ್ಬ ವ್ಯಕ್ತಿ ಸುಖಾಸುಮ್ಮನೆ ಕಾಂಗ್ರೆಸ್ ಗೆ ಜೈ ಶಿವಕುಮಾರ ಜೈ ಅಂತ ಕೂಗುತ್ತಿದ್ದ. ಪ್ರಾಯಶಃ ಕುಡಿದಿದ್ದ (drunk) ಅನಿಸುತ್ತದೆ. ಅವನ ಕೂಗಿನಿಂದ ಸಿಡಿಮಿಡಿಗೊಳ್ಳುವ ಶಿವಕುಮಾರ, ‘ಏಯ್ ಮಧ್ಯಾಹ್ನದ ಹೊತ್ತಲ್ಲೇ ಎಣ್ಣೆ ಹಾಕ್ಕೊಂಡ್ ಬಂದಿದಿಯಾ? ಕುಡ್ದಿರೋನ್ ನೀನೊಬ್ನೇ ಅಲ್ಲ, ಬಾಯ್ಮುಚ್ಚಿಕೊಂಡು ಭಾಷಣ ಕೇಳುವ ಹಾಗಿದ್ದರೆ ಕೂತ್ಕೋ ಇಲ್ಲಾಂದ್ರೆ ಎದ್ ಹೋಗ್ ಇಲ್ಲಿಂದ,’ ಅಂತ ಗದರುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
