Mandya: ಪ್ರಜಾಧ್ವನಿ ಯಾತ್ರೆ ಸಭೆಯಲ್ಲಿ ಕುಡಿದು ಗಲಾಟೆ ಮಾಡುತ್ತಿದ್ದ ವ್ಯಕ್ತಿಗೆ ಎದ್ಹೋಗ್ ಇಲ್ಲಿಂದ ಅಂತ ಗದರಿದ ಡಿಕೆ ಶಿವಕುಮಾರ್
ಪ್ರಜಾಧ್ವನಿ ಯಾತ್ರೆಯ ಭಾಗವಾಗಿ ಇಂದು ನಗರದಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಶಿವಕುಮಾರ ಭಾಷಣ ಮಾಡುವಾಗ ಸಭಿಕರಲ್ಲಿ ಒಬ್ಬ ವ್ಯಕ್ತಿ ಸುಖಾಸುಮ್ಮನೆ ಕಾಂಗ್ರೆಸ್ ಗೆ ಜೈ ಶಿವಕುಮಾರ್ಗೆ ಜೈ ಅಂತ ಕೂಗುತ್ತಿದ್ದ.
ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗಾಗ ಸಾರ್ವಜನಿಕವಾಗಿಯೂ ಕೋಪ ಮಾಡಿಕೊಳ್ಳುತ್ತಾರೆ. ಅಂಥದೊಂದು ಪ್ರಸಂಗ ಇಂದು ಮಂಡ್ಯದಲ್ಲಿ (Mandya) ನಡೆಯಿತು. ಪ್ರಜಾಧ್ವನಿ ಯಾತ್ರೆಯ (Prajadhavni Yatre) ಭಾಗವಾಗಿ ಇಂದು ನಗರದಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಶಿವಕುಮಾರ ಭಾಷಣ ಮಾಡುವಾಗ ಸಭಿಕರಲ್ಲಿ ಒಬ್ಬ ವ್ಯಕ್ತಿ ಸುಖಾಸುಮ್ಮನೆ ಕಾಂಗ್ರೆಸ್ ಗೆ ಜೈ ಶಿವಕುಮಾರ ಜೈ ಅಂತ ಕೂಗುತ್ತಿದ್ದ. ಪ್ರಾಯಶಃ ಕುಡಿದಿದ್ದ (drunk) ಅನಿಸುತ್ತದೆ. ಅವನ ಕೂಗಿನಿಂದ ಸಿಡಿಮಿಡಿಗೊಳ್ಳುವ ಶಿವಕುಮಾರ, ‘ಏಯ್ ಮಧ್ಯಾಹ್ನದ ಹೊತ್ತಲ್ಲೇ ಎಣ್ಣೆ ಹಾಕ್ಕೊಂಡ್ ಬಂದಿದಿಯಾ? ಕುಡ್ದಿರೋನ್ ನೀನೊಬ್ನೇ ಅಲ್ಲ, ಬಾಯ್ಮುಚ್ಚಿಕೊಂಡು ಭಾಷಣ ಕೇಳುವ ಹಾಗಿದ್ದರೆ ಕೂತ್ಕೋ ಇಲ್ಲಾಂದ್ರೆ ಎದ್ ಹೋಗ್ ಇಲ್ಲಿಂದ,’ ಅಂತ ಗದರುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

