AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ

ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ

ರಮೇಶ್ ಬಿ. ಜವಳಗೇರಾ
|

Updated on: Jan 04, 2026 | 6:25 PM

Share

ಸದ್ಯ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದ್ದಾರೆ. ಹೌದು...ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ನಕ್ಕಿರುವ ಪ್ರಸಂಗ ನಡೆದಿದೆ.

ಬೆಂಗಳೂರು, (ಜನವರಿ 04): ಸದ್ಯ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (dk Shivakumar) ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದ್ದಾರೆ. ಹೌದು…ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ನಕ್ಕಿರುವ ಪ್ರಸಂಗ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.