ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆ ಶಿವಕುಮಾರ್
ಕರ್ನಾಟಕದಲ್ಲಿ ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರದ ಸಹಕಾರವಿಲ್ಲದಿರುವುದೇ ಕಾರಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬಿಜೆಪಿ ರಾಜ್ಯಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರಶ್ನಿಸಿದ್ದು, ತೇಜಸ್ವಿ ಸೂರ್ಯ ಅವರ ಹೇಳಿಕೆಗಳನ್ನು ಖಾಲಿ ಟ್ರಂಕ್ ಮಾತು ಎಂದು ತಳ್ಳಿ ಹಾಕಿದ್ದಾರೆ. ವಿಡಿಯೋ ನೋಡಿ.
ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಮೆಟ್ರೋ ದರ ಏರಿಕೆ ಮಾಡಲು ಹೇಗೆ ಸಾಧ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿಚಾರವಾಗಿ ಮಾತನಾಡಿ ಡಿಸಿಎಂ ಡಿಕೆ ಶಿವಕುಮಾರ್, ತೇಜಸ್ವಿ ಸೂರ್ಯನದ್ದು ಬರೀ ಟ್ವೀಟ್, ಸ್ಟೇಟ್ಮೆಂಟ್ ಅಷ್ಟೇ. ಪಾಪ. ಅವನಿಗೆ ಇನ್ನೂ ಅನುಭವವಿಲ್ಲ. ರಾಜ್ಯಕ್ಕೆ ಹಣ ತಂದಿದ್ದು ಏನಾದರೂ ಇದ್ದರೆ ಅದರ ಬಗ್ಗೆ ಮಾತಾಡಲಿ, ಬರೀ ಖಾಲಿ ಟ್ರಂಕ್ ಮಾತನಾಡುವುದು ಬೇಡವೆಂದು ವಾಗ್ದಾಳಿ ಮಾಡಿದ್ದಾರೆ.
ಈರಣ್ಣ ಬಸವ ಟಿವಿ9
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
