ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?

Edited By:

Updated on: Feb 06, 2026 | 3:36 PM

ಸಿಎಂ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ ಆಗಿರುತ್ತಾರೆಂಬ ಯತೀಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್​ ನೀಡಿದ್ದಾರೆ. ಯತೀಂದ್ರರೇ ಹೈಕಮಾಂಡ್ ಎಂದು ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್, ಅವರ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.

ಮಂಗಳೂರು, ಫೆಬ್ರವರಿ 06: ಸಿದ್ದರಾಮಯ್ಯ 5 ವರ್ಷ ಸಿಎಂ. ಪೂರ್ಣಾವಧಿ ಆಡಳಿತಕ್ಕೆ ಹೈಕಮಾಂಡ್ ಗ್ರೀನ್​ ಸಿಗ್ನಲ್ ಕೊಟ್ಟಿದೆ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೊಸ ಬಂಬ್ ಸಿಡಿಸಿದ್ದಾರೆ. ಇದು ಕಾಂಗ್ರೆಸ್​​​ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದಕ್ಕೆ ಸಿಎಂ ಆಕಾಂಕ್ಷಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮಂಗಳೂರಿನ ಬಜ್ಪೆ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಂಎಲ್​ಸಿ ಯತೀಂದ್ರ ಅವರೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್. ಅವರು ಏನು ಹೇಳ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 06, 2026 03:35 PM
Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More