AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಭ್ರಷ್ಟಾಚಾರದ ಬಗ್ಗೆ ಮಾತಾಡುವ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು ಯಾಕಂತೆ? ಕೆ ಎಸ್ ಈಶ್ವರಪ್ಪ

DK Shivakumar: ಭ್ರಷ್ಟಾಚಾರದ ಬಗ್ಗೆ ಮಾತಾಡುವ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು ಯಾಕಂತೆ? ಕೆ ಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Mar 01, 2023 | 12:10 PM

Share

ಶಿವಕುಮಾರ್ ಮನೆಯಲ್ಲಿ ಸಿಕ್ಕ ದಾಖಲೆರಹಿತ ಕೋಟಿಗಟ್ಟಲೆ ಹಣದ ಬಗ್ಗೆ ಅವರು ಯಾರಿಗಾದರೂ ಲೆಕ್ಕ ಕೊಟ್ಟಿದ್ದಾರಾ ಎಂದು ಈಶ್ವರಪ್ಪ ಕೇಳಿದರು.

ಚಾಮರಾಜನಗರ: ಜಿಲ್ಲೆಯಲ್ಲಿ ಇಂದಿನಿಂದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ (Vijay Sankalp Yatre) ಆರಂಭಗೊಂಡಿದ್ದು ಅದರಲ್ಲಿ ಭಾಗಿಯಾಗಲು ಶಿವಮೊಗ್ಗ ಶಾಸಕ ಕೆ ಎಸ್ ಈಶ್ವರಪ್ಪ (KS Eshwarappa) ಆಗಮಿಸಿದ್ದಾರೆ. ಯಾತ್ರೆಗೆ ಮೊದಲು ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಸಚಿವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ತರಾಟೆಗೆ ತೆಗೆದುಕೊಂಡರು. ಮಾತೆತ್ತಿದ್ದರೆ ಭ್ರಷ್ಟಾಚಾರದ ಬಗ್ಗೆ ಮಾತಾಡುವ ಶಿವಕುಮಾರ್ ತಿಹಾರ್ ಜೈಲಿನ ಅತಿಥಿಯಾಗಿದ್ದು ಯಾಕೆ ಅನ್ನೋದನ್ನು ಹೇಳ್ತಾರಾ? ಅವರ ಮನೆಯಲ್ಲಿ ಸಿಕ್ಕ ದಾಖಲೆರಹಿತ ಕೋಟಿಗಟ್ಟಲೆ ಹಣದ ಬಗ್ಗೆ ಅವರು ಯಾರಿಗಾದರೂ ಲೆಕ್ಕ ಕೊಟ್ಟಿದ್ದಾರಾ ಎಂದು ಈಶ್ವರಪ್ಪ ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 01, 2023 11:56 AM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.