ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಫಿಲ್ಮ್ ಚೇಂಬರ್​ನಲ್ಲಿ ಮತ್ತೆ ಗುಡುಗಿದ ಡಿಕೆಶಿ

Updated on: Apr 27, 2025 | 11:39 AM

ಈ ಮೊದಲು ಕನ್ನಡ ಚಿತ್ರರಂಗದ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ್ದ ಒಂದು ಹೇಳಿಕೆ ಬಹಳ ಸುದ್ದಿಯಾಗಿತ್ತು. ಅದಕ್ಕೆ ಹಲವರು ಪ್ರತಿಕ್ರಿಯೆ ನೀಡಿದ್ದರು. ಈಗ ಮತ್ತೆ ಕನ್ನಡ ಚಿತ್ರರಂಗ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಡಾ. ರಾಜ್​ಕುಮಾರ್ ಜನ್ಮದಿನದ ಪ್ರಯುಕ್ತ ಫಿಲ್ಮ್ ಚೇಂಬರ್​ನಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಡಿಕೆ ಶಿವಕುಮಾರ್ ಮಾತನಾಡಿದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಈ ಮೊದಲು ಚಿತ್ರರಂಗದ ಬಗ್ಗೆ ನೀಡಿದ್ದ ‘ನಟ್ಟು ಬೋಲ್ಟು’ ಹೇಳಿಕೆ ಸಖತ್ ಸುದ್ದಿ ಆಗಿತ್ತು. ಅದಕ್ಕೆ ಅನೇಕರು ಪ್ರತಿಕ್ರಿಯೆ ನೀಡಿದ್ದರು. ಈಗ ಡಿಕೆ ಶಿವಕುಮಾರ್ ಅವರು ಮತ್ತೆ ಕನ್ನಡ ಚಿತ್ರರಂಗದ (Kannada Film Industry) ಬಗ್ಗೆ ಮಾತನಾಡಿದ್ದಾರೆ. ಡಾ. ರಾಜ್​ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಡಿಕೆಶಿ ಮಾತನಾಡಿದರು. ‘ಇತ್ತೀಚಿನ ದಿನಗಳಲ್ಲಿ ನಮ್ಮ ಕನ್ನಡ ಚಿತ್ರರಂಗಕ್ಕೆ ಒಂದು ಗೌರವ ಬಂದಿದೆ. ಅದನ್ನು ಕಾಪಾಡಿಕೊಂಡು ಹೋಗಬೇಕು. ಮಧ್ಯದಲ್ಲಿ ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಚಿತ್ರರಂಗದಲ್ಲಿ ಇಲ್ಲದವರು, ನಿವೃತ್ತಿ ಹೊಂದಿದವರೆಲ್ಲ ಮಾತನಾಡಲು ಶುರು ಮಾಡಿದ್ದಾರೆ. ಮಾತನಾಡುವವರೆಲ್ಲ ಮೊದಲು ಚಿತ್ರರಂಗವನ್ನು ಉಳಿಸಿ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More