AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ವಿಜಯಲಕ್ಷ್ಮಿ ದರ್ಶನ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಮಾತು

ವಿಡಿಯೋ: ವಿಜಯಲಕ್ಷ್ಮಿ ದರ್ಶನ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಮಾತು

ಮಂಜುನಾಥ ಸಿ.
|

Updated on: Jul 24, 2024 | 2:04 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮತ್ತು ಗ್ಯಾಂಗ್​ ಮೇಲೆ ಚಾರ್ಜ್ ಶೀಟ್ ತಯಾರಾಗುತ್ತಿರುವ ಹೊತ್ತಿನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಭೇಟಿಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಇತರರ ಮೇಲೆ ಚಾರ್ಜ್ ಶೀಟ್ ರೆಡಿಯಾಗುತ್ತಿರುವ ಸಮಯದಲ್ಲಿ ದರ್ಶನ್​ರ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಸಹೋದರ ದಿನಕರ್ ಇಂದು ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಸುಮಾರು 20 ನಿಮಿಷಗಳ ಕಾಲ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ ವಿಜಯಲಕ್ಷ್ಮಿ ಮತ್ತು ದಿನಕರ್, ಡಿಸಿಎಂ ನಿವಾಸದಿಂದ ತೆರಳಿದರು. ಬಳಿಕ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ವಿಜಯಲಕ್ಷ್ಮಿ ಅವರು ಆಗಮಿಸಿದ ಉದ್ದೇಶ ತಿಳಿಸಿದರು. ಜೊತೆಗೆ ದರ್ಶನ್ ಪ್ರಕರಣದ ಬಗ್ಗೆಯೂ ಮಾತನಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More