ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಇತರರ ಮೇಲೆ ಚಾರ್ಜ್ ಶೀಟ್ ರೆಡಿಯಾಗುತ್ತಿರುವ ಸಮಯದಲ್ಲಿ ದರ್ಶನ್ರ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಸಹೋದರ ದಿನಕರ್ ಇಂದು ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಸುಮಾರು 20 ನಿಮಿಷಗಳ ಕಾಲ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ ವಿಜಯಲಕ್ಷ್ಮಿ ಮತ್ತು ದಿನಕರ್, ಡಿಸಿಎಂ ನಿವಾಸದಿಂದ ತೆರಳಿದರು. ಬಳಿಕ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ವಿಜಯಲಕ್ಷ್ಮಿ ಅವರು ಆಗಮಿಸಿದ ಉದ್ದೇಶ ತಿಳಿಸಿದರು. ಜೊತೆಗೆ ದರ್ಶನ್ ಪ್ರಕರಣದ ಬಗ್ಗೆಯೂ ಮಾತನಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ