‘ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ’: ಡಿವಿಜಿ ಮಂಕುತಿಮ್ಮನ ಕಗ್ಗ ಉಲ್ಲೇಖಿಸಿ ಬಿಜೆಪಿಗೆ ತಿವಿದ ಡಿಕೆ ಶಿವಕುಮಾರ್

Updated on: Mar 11, 2025 | 2:18 PM

ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಸ್ಥಾನ ನೀಡುವ ವಿಚಾರವಾಗಿ ಗದ್ದಲವೆಬ್ಬಿಸಿದ ಪ್ರತಿಪಕ್ಷ ನಾಯಕರಿಗೆ ಡಿವಿಜಿ ಅವರ ಮಂಕುತಿಮ್ಮನ ಕಗ್ಗದ ಸಾಲು ಉಲ್ಲೇಖಿಸುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ನೀಡಿದರು. ಡಿಕೆ ಶಿವಕುಮಾರ್ ಹೇಳಿದ ಕಗ್ಗದ ಸಾಲು ಯಾವುದು? ಯಾಕೆ ಹೇಳಿದರು? ವಿವರಗಳಿಗೆ ವಿಡಿಯೋ ನೋಡಿ.

ಬೆಂಗಳೂರು, ಮಾರ್ಚ್ 11: ವಿಧಾನಸಭೆಯ ಬಜೆಟ್ ಕಲಾಪದ ವೇಳೆ ಮಂಗಳವಾರ ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಚರ್ಚೆ ಕಾವೇರಿತು. ಇದೇ ವೇಳೆ, ಪ್ರತಿಪಕ್ಷಗಳ ನಾಯಕರ ಗದ್ದಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಡಿವಿಜಿ ಅವರ ಮಂಕುತಿಮ್ಮನ ಕಗ್ಗದ ಸಾಲು ಉಲ್ಲೇಖಿಸಿ ಟಾಂಗ್ ನೀಡಿದರು. ‘‘ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ, ಗದ್ದಲವ ತುಂಬಿ ಪ್ರಸಿದ್ದನಾಗುತಿಹೆ. ಉದ್ಧರಿಸುವೆನು ಜಗವನೆನ್ನುತಿಹ ಸಖನೆ, ನಿನ್ನುದ್ಧಾರವೆಷ್ಟಾಯ್ತೊ ಮಂಕುತಿಮ್ಮ’’ ಎಂದು ವಿಪಕ್ಷದವರನ್ನು ಲೇವಡಿ ಮಾಡಿದರು. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More