ಬೆಂಗಳೂರು, ಆಗಸ್ಟ್ 18: ನಾನು ಸನ್ಯಾಸಿ ಅಲ್ಲ ಮುಖ್ಯಮಂತ್ರಿ ಆಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪದೇ ಪದೇ ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashoka) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ಒಳಗಡೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ. ಅದು ಕಾಂಗ್ರೆಸ್ ಪಕ್ಷದ ಒಳಗಿನ ವಿಚಾರ ನಮಗೆ ಸಂಬಂಧವಿಲ್ಲ. ಜಿ. ಪರಮೇಶ್ವರ, ಖರ್ಗೆ, ಎಂಬಿ ಪಾಟೀಲ್ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ. ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್ ಕೂಡ ಬೀಳಬೇಕು ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published On - 4:36 pm, Sun, 18 August 24