ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ
ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command) ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಕರೆದಿದ್ದಾರೆ.
ಬೆಂಗಳೂರು, (ಮಾರ್ಚ್ 03): ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command) ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಕರೆದಿದ್ದಾರೆ. ಹೌದು…ಇದೇ ಮಾರ್ಚ್ 10ರಂದು ಖಾಸಗಿ ಹೋಟೆಲ್ನಲ್ಲಿ ಔತಣಕೂಟ ಆಯೋಜಿಸಿದ್ದಾರೆ. ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳಿಸುತ್ತಿರುವುದರಿಂದ ಈ ಡಿನ್ನರ್ ಪಾರ್ಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಔತನಕೂಟದ ಮೂಲಜ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಇದಾಗಿದೆ ಎಂದು ವಿಶ್ಷೇಷಿಸಲಾಗಿದೆ.
ಇದನ್ನೂ ಓದಿ: 60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ
Loading...
Unable to load recommendations.
Follow Us
