AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರು ವಿಧೇಯಕ ಜಾರಿಗೆ ತಂದು ಶಿವಕುಮಾರ್ ಹೆಸರು ಕೆಡಿಸಿಕೊಳ್ಳುವುದು ಬೇಡ: ಎಸ್ ಎಸ್ ವಿಶ್ವನಾಥ್

ಗ್ರೇಟರ್ ಬೆಂಗಳೂರು ವಿಧೇಯಕ ಜಾರಿಗೆ ತಂದು ಶಿವಕುಮಾರ್ ಹೆಸರು ಕೆಡಿಸಿಕೊಳ್ಳುವುದು ಬೇಡ: ಎಸ್ ಎಸ್ ವಿಶ್ವನಾಥ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 10, 2025 | 6:18 PM

Share

ಶಿವಕುಮಾರ್ ಮಾತುಗಳಿಗೆ ಒಪ್ಪದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಗ್ರೇಟರ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ವಿಭಜಿಸುವುದು ಸರಿಯಲ್ಲ, ಕೇಂದ್ರ ಸರ್ಕಾರದ ಡಿಲಿಮಿಟೇಷನ್ ಯೋಜನೆ ಜಾರಿಗೊಂಡರೆ ಬಹಳ ಕಷ್ಟವಾಗುತ್ತದೆ, ಹಾಗಾಗಿ ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ವಿಧೇಯಕ ಜಾರಿಗೊಳಿಸಿ ಹೆಸರು ಕೆಡಿಸಿಕೊಳ್ಳುವುದು ಬೇಡ ಎಂದರು.

ಬೆಂಗಳೂರು, ಮಾರ್ಚ್ 10: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ (Greater Bengaluru Bill) ಸಂಬಂಧಿಸಿದಂತೆ ಸದನದಲ್ಲಿ ಮುಂದುವರಿದ ಚರ್ಚೆಯಲ್ಲಿ ಡಿಕೆ ಶಿವಕುಮಾರ್, ಬೆಂಗಳೂರನ್ನು ವಿಭಜನೆ ಮಾಡಿದ ಕಾರಣ ವಿವರಿಸಿದರು. ಹಿಂದೆ ಕೇವಲ ಬೆಂಗಳೂರು ಮಾತ್ರ ಇತ್ತು ಮತ್ತು ತಾನು ಬೆಂಗಳೂರು ಜಿಲ್ಲಾ ಪರಿಷತ್ ಸದಸ್ಯನಾಗಿದ್ದೆ; ಆದರೆ, ನಂತರದ ದಿನಗಳಲ್ಲಿ 73 ಮತ್ತು 74 ನೇ ತಿದ್ದುಪಡಿ ಜಾರಿಗೆ ಬಂದು ಆಡಳಿತಾತ್ಮಕವಾಗಿ ವ್ಯವಸ್ಥೆ ಸುರಳೀತಗೊಳಿಸಲು ಬೆಂಗಳೂರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರಗಳಾಗಿ ವಿಂಗಡಿಸಲಾಯಿತು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮುಡಾ ಪ್ರಕರಣ ರಾಜಕೀಯ ಪ್ರೇರಿತ ಅಂತ ಮೊದಲೇ ಹೇಳಿದ್ದೆ, ನ್ಯಾಯಾಲಯ ಹೇಳಿದ್ದನ್ನು ಪಾಲಿಸುತ್ತೇವೆ: ಶಿವಕುಮಾರ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.