ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್

ಮಹೇಶ್ ಇ, ಭೂಮನಹಳ್ಳಿ Edited By:

Updated on: Jun 10, 2026 | 6:08 PM

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದರು. ದೆಹಲಿಯ 10 ಜನಪಥ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾದರು. ಸಿಎಂ ಶಿವಕುಮಾರ್‌ಗೆ ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದರು.

ದೆಹಲಿ, ಜೂ.10: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ‘10 ಜನಪಥ್’ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಈ ದೆಹಲಿ ಭೇಟಿಯ ವೇಳೆ ಕೇವಲ ಸೋನಿಯಾ ಗಾಂಧಿ ಮಾತ್ರವಲ್ಲದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಉಪಸ್ಥಿತರಿದ್ದರು. ಸಿಎಂ ಆದ ಬಳಿಕ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಶಿವಕುಮಾರ್ ಅವರಿಗೆ ಗಾಂಧಿ ಕುಟುಂಬದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...