AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 6ನೇ ತರಗತಿಯಿಂದ AI ಶಿಕ್ಷಣ, ಬೆಂಗಳೂರಿನಲ್ಲಿ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಮಹತ್ವದ ಘೋಷಣೆ

Video: 6ನೇ ತರಗತಿಯಿಂದ AI ಶಿಕ್ಷಣ, ಬೆಂಗಳೂರಿನಲ್ಲಿ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಮಹತ್ವದ ಘೋಷಣೆ

ಅಕ್ಷತಾ ವರ್ಕಾಡಿ
|

Updated on:Aug 15, 2026 | 1:13 PM

Share

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಯುವಶಕ್ತಿಗೆ ಆದ್ಯತೆ ನೀಡಿ ಮಾತನಾಡಿದ್ದಾರೆ. ಪರೀಕ್ಷಾ ಪದ್ಧತಿಯ ಸುಧಾರಣೆ, ಎಐ ಮತ್ತು ಕೋಡಿಂಗ್ ಶಿಕ್ಷಣ, ಉಚಿತ ಬಸ್ ಪಾಸ್, ಭಾರತ ಜೋಡೋ ಯುವ ಸಂಘಗಳ ಸ್ಥಾಪನೆ, ಯುವ ನಿಧಿ ಮೂಲಕ ಉದ್ಯೋಗ ಮತ್ತು ಹಿಂದುಳಿದ ತಾಲ್ಲೂಕುಗಳಲ್ಲಿ ಕೈಗಾರಿಕಾ ಅಭಿವೃದ್ಧಿಯಂತಹ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಯುವಕರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಗುರಿ ಹೊಂದಿದ್ದಾರೆ.

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ, ನವಭಾರತದ ನಿರ್ಮಾಣದ ದೂರದೃಷ್ಟಿಯೊಂದಿಗೆ ಕರ್ನಾಟಕದ ಯುವಜನತೆಯ ಶೈಕ್ಷಣಿಕ ಹಾಗೂ ತಾಂತ್ರಿಕ ಭವಿಷ್ಯ ರೂಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಪರೀಕ್ಷಾ ಪದ್ಧತಿಯಲ್ಲಿ ಪಾರದರ್ಶಕತೆ ತರಲು ಪರಿಣಿತ ಅಧಿಕಾರಿ ಸಮಿತಿಯನ್ನು ರಚಿಸಲಾಗಿದೆ. ಇದು ಎರಡು ತಿಂಗಳಲ್ಲಿ ವರದಿ ಸಲ್ಲಿಸಲಿದ್ದು, ರಾಜ್ಯಕ್ಕೆ ಮಾದರಿಯಾಗುವ ಪರೀಕ್ಷಾ ಕ್ರಮ ಜಾರಿಗೊಳಿಸಲಿದೆ. ತಂತ್ರಜ್ಞಾನ ಆಧಾರಿತ ಹೊಸ ಯುಗಕ್ಕೆ ಸಿದ್ಧರಾಗಲು “ಎಐ ಅಕ್ಷರ ಅಭಿಯಾನ” ಮತ್ತು “ಕೋಡಿಂಗ್ ಗುರುಕುಲ” ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಆರನೇ ತರಗತಿಯಿಂದಲೇ ಎಐ ಶಿಕ್ಷಣ ಪರಿಚಯಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ ದೇಶದ ಪ್ರಥಮ ಸರ್ಕಾರಿ ಸ್ವಾಮ್ಯದ ಎಐ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಸಿಎಂ ಮಹತ್ವದ ಘೋಷಣೆ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 15, 2026 01:12 PM

Follow Us