ಗ್ಯಾರಂಟಿ ಯೋಜನೆ; ರಾಮನಗರದಲ್ಲಿ ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಖಡಕ್ ಟಾಂಗ್

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 05, 2023 | 10:09 AM

5 ಗ್ಯಾರಂಟಿಗಳನ್ನ ಕೊಡುವ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಇಲ್ಲೋ, ಇದನ್ನ ಕುಮಾರಸ್ವಾಮಿಯವರು ಕೊಡ್ತೀದ್ರಾ ಎನ್ನುವ ಮೂಲಕ ರಾಮನಗರದಲ್ಲಿ ಡಿಕೆ ಶಿವಕುಮಾರ್​ ಟಾಂಗ್​ ಕೊಟ್ಟಿದ್ದಾರೆ.

ರಾಮನಗರ: ನಾವು ಚುನಾವಣೆಗಿಂತ ಮೊದಲು ಐದು ಗ್ಯಾರೆಂಟಿಗಳಿಗೆ ಮಾತ್ ಕೊಟ್ಟಿದ್ವಿ, ಇದೀಗ ಎಲ್ಲಾ ಹೆಣ್ಮಕ್ಳು ಸರ್ಕಾರಿ ಬಸ್​ಲ್ಲಿ ಓಡಾಡ್ತಾ ಇದೀರಲ್ಲ. ಈ ತಿಂಗಳಿನಿಂದ ಯಾರೂ ಕರೆಂಟ್ ಬಿಲ್ ಕಟ್ಟಂಗಿಲ್ಲ. ಮುಂದಕ್ಕೆ ನಿಮಗೆ ಸೊನ್ನೆ ಬಿಲ್ಲು. 10 ಕೆ.ಜಿ ಮಾತ್ ಕೊಟ್ಟಿದ್ದೊ ಈ‌ ತಿಂಗಳಿನಿಂದ 5 ಕೆಜಿ ಕೊಡ್ತಾ ಇದ್ದೀವಿ, ಇನ್ನು 5 ಕೆ.ಜಿಗೆ ಹಣ ಕೊಡ್ತಾ ಇದ್ದೀವಿ. ಇನ್ನು 14 ನೇ ತಾರಿಖಿನಿಂದ ಭಾಗ್ಯದ ಲಕ್ಷ್ಮಿ ಬಾರಮ್ಮ ಆ ದೇವಿ ನಿಮಗೆ ಪ್ರತಿ ಹೆಣ್ಮಗಳಿಗೆ 2‌ ಸಾವಿರ ರೂ ಅಕೌಂಟಿಗೆ ಕೊಡುತ್ತಿದ್ದಾಳೆ. ಈ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಇಲ್ಲೋ, ಇದನ್ನ ಕುಮಾರಸ್ವಾಮಿ (Kumarswamy)ಯವರು ಕೊಡ್ತೀದ್ರಾ ಎನ್ನುವ ಮೂಲಕ ರಾಮನಗರದಲ್ಲಿ ಡಿಕೆ ಶಿವಕುಮಾರ್(DK shivakumar)​ ಟಾಂಗ್​ ಕೊಟ್ಟಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More