AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 17, 2025 | 3:29 PM

Share

ಈಡಿ ನೋಟೀಸ್ ಮತ್ತು ಸಮನ್ಸ್​ಗಳು ತಮಗೆ ಹೊಸದೇನೂ ಅಲ್ಲ ಇದಕ್ಕೂ ಮೊದಲು ಸಲ ಹಲವು ಸಲ ತನಗೆ ಮತ್ತು ಸುರೇಶ್​ಗೆ ಈಡಿಯಿಂದ ಬುಲಾವ್ ಬಂದಿದೆ, ಕರೆದಾಗೆಲ್ಲ ಹೋಗಿ ವಿಚಾರಣೆ ಎದುರಿಸಿದ್ದೇವೆ, ಆಸಲಿಗೆ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ತನಿಖೆ ಮಾಡಿ ಅಂತ ಹೇಳಿದ್ದೇ ಸುರೇಶ್, ಜಾರಿ ನಿರ್ದೇಶನಾಲಯದ ತನಿಖೆಗೆ ಸಂಪೂರ್ಣ ಸಹಕಾರವನ್ನು ಸುರೆಶ್ ನೀಡುತ್ತಾರೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಜೂನ್ 17: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (Enforcement Directorate) ಡಿಕೆ ಸುರೇಶ್​ಗೆ ಸಮನ್ಸ್ ಜಾರಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಐಶ್ವರ್ಯ ಗೌಡ ಪ್ರಕರಣ ಮತ್ತು ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ, ಯಾರೋ ತಮ್ಮ ಹೆಸರ ದುರುಪಯೋಗ ಪಡಿಸಿಕೊಂಡು ಜನರನ್ನು ವಂಚಿಸುತ್ತಿರುವುದು ತಮ್ಮ ಗಮನಕ್ಕೂ ಬಂದಿತ್ತು, ಈ ಬಗ್ಗೆ ಸುರೇಶ್ ದೂರನ್ನು ಕೂಡ ದಾಖಲಿಸಿದ್ದಾರೆ, ಇಂದು ಬೆಳಗ್ಗೆ ಈಡಿ ಅಧಿಕಾರಿಗಳು ನೋಟೀಸ್ ತೆಗೆದುಕೊಂಡು ಬಂದಾಗ, ಸುರೇಶ್ ಮನೆಯಲ್ಲಿರಲಿಲ್ಲ, ಅದರೆ ತಾನಿದ್ದೆ, ಸುರೇಶ್ ಈಡಿ ಕಚೇರಿಗೆ ಬಂದು ವಿಚಾರಣೆ ಎದುರಿಸುತ್ತಾರೆಂದು ಅವರಿಗೆ ಹೇಳಿ ಕಳಿಸಿದೆ ಎಂದು ಹೇಳಿದರು.

ಇದನ್ನೂ ಓದಿ:  ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಕೆ ಶಿವಕುಮಾರ್ ಏನಂದ್ರು ನೋಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More