ಕುಮಾರಸ್ವಾಮಿ ವಿಧಾನಸೌಧದಲ್ಲಿ ಮಾತಾಡಿದ ಆಡಿಯೋವೊಂದನ್ನು ಬಿಡುಗಡೆ ಮಾಡಿದ ಡಿಕೆ ಸುರೇಶ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 06, 2024 | 5:37 PM

ಸುರೇಶ್ ಆಡಿಯೋ ಬಿಡುಗಡೆ ಮಾಡಿದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದ್ದರು. ಕಾಂಗ್ರೆಸ್ ಮತ್ತು ಎನ್​ಡಿಎ ಒಕ್ಕೂಟ ಚನ್ನಪಟ್ಟಣ ಉಪ ಚುನಾವಣೆಯನ್ನು ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸಿವೆ. ಕುಮಾರಸ್ವಾಮಿಗೆ ಮಗನನ್ನು ರೀಲಾಂಚ್ ಮಾಡುವ ಉಮೇದಿಯಿದ್ದರೆ ಯೋಗೇಶ್ವರ್ ರನ್ನು ಗೆಲ್ಲಿಸಿ ಕುಮಾರಸ್ವಾಮಿಯ ಪ್ರಭಾv ಕಮ್ಮಿ ಮಾಡುವ ಗುರಿ ಕಾಂಗ್ರೆಸ್​ಗಿದೆ.

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಆಡಿಯೋಗಳನ್ನು ಸಾರ್ವಜನಿಕಗೊಳಿಸುವ ಕೆಲಸ ಶುರುವಾಗಿದೆ. ಚುನಾವಣೆಗಳನ್ನು ಐದು ವರ್ಷಕ್ಕೊಮ್ಮೆ ಮಾಡುವ ಅಗತ್ಯವಿಲ್ಲ, ಚುನಾವಣೆಗಳನ್ನು ಗೆಲ್ಲಲು ಮತದಾರರ ಬಳಿಗೆ ಹೋಗಲೇಬೇಕು ಅಂತೇನಿಲ್ಲ, ಅದಕ್ಕೆ ತಂತ್ರಗಾರಿಕೆ ಬೇಕು, ಮತದಾನಕ್ಕೆ ಇನ್ನೂ ಒಂದು ವಾರ ಇದೆ ಅನ್ನುವಾಗ ಕ್ಷೇತ್ರಗಳಿಗೆ ಹೋಗಿ ಈ ತಂತ್ರಗಾರಿಕೆಯನ್ನು ಬಳಸಿದರೆ ಸಾಕು ಎಂದು ಹೆಚ್ ಡಿ ಕುಮಾರಸ್ವಾಮಿಯವರು ವಿಧಾನಸೌಧದಲ್ಲಿ ಹೇಳಿದರೆನ್ನಲಾಗಿರುವ ಆಡಿಯೋವನ್ನು ಇಂದು ಬೇವೂರಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಬಿಡುಗಡೆ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಆಂಬ್ಯುಲೆನ್ಸ್​ನಲ್ಲಿ ಪ್ರಚಾರಕ್ಕೆ ಬರ್ತಾರೆ: ದೇವೇಗೌಡ ವಿರುದ್ಧ ಡಿಕೆ ಸುರೇಶ್ ಹೇಳಿಕೆಯನ್ನೇ ಪ್ರತ್ಯಸ್ತ್ರ ಮಾಡಲು ಮುಂದಾದ ದಳ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.