ಸುರೇಶ್ ಹೇಳಿದ್ದರ ಜೊತೆಗೆ ಸಂವಿಧಾನ ಬದಲಾವಣೆ ಮಾಡುತ್ತೇವೆಂದವರ ಬಗ್ಗೆಯೂ ಚರ್ಚೆಯಾಗಬೇಕು; ಸಂತೋಷ್ ಲಾಡ್, ಸಚಿವ

Updated on: Feb 02, 2024 | 12:59 PM

ದಕ್ಷಿಣದ ರಾಜ್ಯಗಳಿಂದ ಸಂಗ್ರಹವಾಗುವ ತೆರಿಗೆ ಹಣದಲ್ಲಿ ಹೆಚ್ಚಿನ ಪಾಲನ್ನು ಉತ್ತರದ ರಾಜ್ಯಗಳಿಗೆ ಹಂಚುವುದು ಯಾವ ನ್ಯಾಯ? 2014 ರಿಂದ ಈ ತಾರತಮ್ಯ ಜರುಗುತ್ತಿದೆ ಅಂತ ಸುರೇಶ್ ಹೇಳಿರುವುದರಲ್ಲಿ ತಪ್ಪೇನಿದೆ? ಅವರು ಎತ್ತಿರುವ ಪ್ರಶ್ನೆಯನ್ನು ಸಮರ್ಥಿಸುತ್ತೇನೆ ಎಂದು ಸಂತೋಷ್ ಲಾಡ್ ಹೇಳಿದರು.

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಗೋಷ್ಟಿ ಉದ್ದೇಶಿಸಿ ಮಾತಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad), ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿಕೆ ಸುರೇಶ್ (DK Suresh) ಮಾತಾಡಿರುವುದು ಅವರ ಅಭಿಪ್ರಾಯ ಮಾತ್ರ, ಆದರೆ ಅನುದಾನ (grants) ವಿಚಾರದಲ್ಲಿ ಅವರು ಹೇಳಿರುವುದನ್ನು ಸಮರ್ಥಿಸುವುದಾಗಿ ಹೇಳಿದರು. ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಬಿಡುಗಡೆಯಾಗುವ ಅನುದಾನಗಳಲ್ಲಿ ಜರುಗುತ್ತಿರುವ ತಾರತಮ್ಯದ ಬಗ್ಗೆ ಸುರೇಶ್ ವಾಸ್ತವ ಸಂಗತಿಯನ್ನು ಹೇಳಿದ್ದಾರೆ. ದಕ್ಷಿಣದ ರಾಜ್ಯಗಳಿಂದ ಸಂಗ್ರಹವಾಗುವ ತೆರಿಗೆ ಹಣದಲ್ಲಿ ಹೆಚ್ಚಿನ ಪಾಲನ್ನು ಉತ್ತರದ ರಾಜ್ಯಗಳಿಗೆ ಹಂಚುವುದು ಯಾವ ನ್ಯಾಯ? 2014 ರಿಂದ ಈ ತಾರತಮ್ಯ ಜರುಗುತ್ತಿದೆ ಅಂತ ಸುರೇಶ್ ಹೇಳಿರುವುದರಲ್ಲಿ ತಪ್ಪೇನಿದೆ? ಅವರು ಎತ್ತಿರುವ ಪ್ರಶ್ನೆಯನ್ನು ಸಮರ್ಥಿಸುತ್ತೇನೆ ಎಂದು ಸಂತೋಷ್ ಲಾಡ್ ಹೇಳಿದರು.

ಪ್ರತ್ಯೇಕ ದಕ್ಷಿಣ ಭಾರತದ ಬಗ್ಗೆ ಸಂಸದ ಹೇಳಿದ್ದನ್ನು ಪುನಃ ಅವರ ಗಮನಕ್ಕೆ ತಂದಾಗ, ಅದನ್ನು ಅವರಿಗೆ ಕೇಳಬೇಕು ಎಂದರು. ದಿನಬೆಳಗಾದರೆ ಸಂವಿಧಾನ ಬದಲಾಯಿಸುತ್ತೇವೆ ಅಂತ ಹೇಳುವವರ ಬಗ್ಗೆ ಯಾಕೆ ಪ್ರಶ್ನೆ ಏಳಲ್ಲ, ಸುರೇಶ್ ಹೇಳಿದ್ದು ಚರ್ಚೆಯ ವಿಷಯವಾದರೆ ಡಾ ಭೀಮರಾವ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ವಿಷಯದ ಬಗ್ಗೆ ಸಹ ಚರ್ಚೆ ಅಗಬೇಕು ಎಂದು ಸಚಿವ ಲಾಡ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More