ಬೆಳಗಾವಿ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಶೆಟ್ಟರ್​​ರನ್ನು ಆಹ್ವಾನಿಸಿದ್ದಕ್ಕೆ ಸಮರ್ಥನೆ ನೀಡಿದ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jan 17, 2025 | 8:23 PM

ದಲಿತ ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಶಿವಕುಮಾರ್ ಒತ್ತಡದ ಮೇರೆಗೆ ರದ್ದಾಯಿತು, ಎಂದು ಬೇಸರ ಮಾಡಿಕೊಂಡಿರುವ ಸತೀಶ್ ಜಾರಕಿಹೊಳಿ ಕೆಲ ಶಾಸಕರೊಂದಿಗೆ ದುಬೈ ಪ್ರವಾಸ ಹೊರಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಮಂಜಸ ಉತ್ತರ ನೀಡದ ಶಿವಕುಮಾರ್ ಯಾರು ಏನು ಬೇಕಾದರೂ ಮಾತಾಡಿಕೊಳ್ಳಲಿ, ತನಗೂ ಇದಕ್ಕೂ ಸಂಬಂಧವಿಲ್ಲ, ಸುರ್ಜೆವಾಲಾ ಇಲ್ಲೇ ಇದ್ದಾರೆ ಅವರನ್ನೇ ಕೇಳಿ ಎಂದರು.

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಹ್ವಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದರು. ಇದೊಂದು ಸರ್ಕಾರೀ ಕಾರ್ಯಕ್ರಮ, ಮಹಾತ್ಮಾ ಗಾಂಧಿ ಹಾಗೂ ಡಾ ಬಿಅರ್ ಅಂಬೇಡ್ಕರ್ ಎಲ್ಲರಿಗೂ ಸೇರಿದವರು, ಸಂವಿಧಾನ ಪ್ರತಿಯೊಬ್ಬ ಭಾರತೀಯನ ಆಸ್ತಿ, ಹಾಗಾಗಿ ಶೆಟ್ಟರ್ ಅವರೊಂದಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಅವರನ್ನೂ ಆಹ್ವಾನಿಸಲಾಗಿದೆ, ತಮ್ಮ ಕಾರ್ಯಕ್ರಮಕ್ಕೆ ಜೆಡಿಎಸ್ ಮತ್ತು ಬಿಜೆಪಿಯವರನ್ನು ಬಿಟ್ಟು ಯಾರೂ ಬೇಕಾದರೂ ಬರಬಹುದು, ಮಾಧ್ಯಮದವರೂ ಬರಬಹುದು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಹಿಂದ ನಾಯಕರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ: ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.