‘ನನಗೂ ಸುದೀಪ್ಗೂ ತಂದಿಡಬೇಡಿ’; ಮನವಿ ಮಾಡಿಕೊಂಡ ರವಿಚಂದ್ರನ್
‘ನಾನು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಎಲ್ಲರೂ ಶಾಂತರಾಗಿರಿ. ನನ್ನ ಸುದೀಪ್ ಮಧ್ಯೆ ತಂದಿಡಬೇಡಿ’ ಎಂದು ರವಿಚಂದ್ರನ್ ಕೋರಿದ್ದಾರೆ.
ನಿರ್ಮಾಪಕ ಎಂಎನ್ ಕುಮಾರ್ (MN Kumar) ಹಾಗೂ ಸುದೀಪ್ ಮಧ್ಯೆ ಮನಸ್ತಾಪ ಉಂಟಾಗಿದೆ. ಸುದೀಪ್ ಚಿತ್ರಗಳನ್ನು ಕುಮಾರ್ ನಿರ್ಮಾಣ ಮಾಡಿದ್ದರು. ಇಬ್ಬರ ಮಧ್ಯೆ ಗೆಳೆತನ ಇತ್ತು. ಆದರೆ, ಈಗ ಈ ಗೆಳೆತನ ಹಾಳಾಗಿದೆ. ಎಂಎನ್ ಕುಮಾರ್ ಫಿಲ್ಮ್ ಚೇಂಬರ್ ಮೊರೆ ಹೋದರೆ, ಸುದೀಪ್ (Sudeep) ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಇವರ ಮಧ್ಯೆ ಮೂಡಿರುವ ಮನಸ್ತಾಪವನ್ನು ಪರಿಹರಿಸಲು ರವಿಚಂದ್ರನ್ ಮುಂದಾಗಿದ್ದಾರೆ. ‘ನಾನು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಎಲ್ಲರೂ ಶಾಂತರಾಗಿರಿ. ನನ್ನ- ಸುದೀಪ್ ಮಧ್ಯೆ ತಂದಿಡಬೇಡಿ’ ಎಂದು ರವಿಚಂದ್ರನ್ ಕೋರಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us