‘ನನಗೂ ಸುದೀಪ್​​ಗೂ ತಂದಿಡಬೇಡಿ’; ಮನವಿ ಮಾಡಿಕೊಂಡ ರವಿಚಂದ್ರನ್

|

Updated on: Jul 19, 2023 | 4:00 PM

‘ನಾನು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಎಲ್ಲರೂ ಶಾಂತರಾಗಿರಿ. ನನ್ನ ಸುದೀಪ್ ಮಧ್ಯೆ ತಂದಿಡಬೇಡಿ’ ಎಂದು ರವಿಚಂದ್ರನ್ ಕೋರಿದ್ದಾರೆ.

ನಿರ್ಮಾಪಕ ಎಂಎನ್​ ಕುಮಾರ್ (MN Kumar) ಹಾಗೂ ಸುದೀಪ್ ಮಧ್ಯೆ ಮನಸ್ತಾಪ ಉಂಟಾಗಿದೆ. ಸುದೀಪ್ ಚಿತ್ರಗಳನ್ನು ಕುಮಾರ್ ನಿರ್ಮಾಣ ಮಾಡಿದ್ದರು. ಇಬ್ಬರ ಮಧ್ಯೆ ಗೆಳೆತನ ಇತ್ತು. ಆದರೆ, ಈಗ ಈ ಗೆಳೆತನ ಹಾಳಾಗಿದೆ. ಎಂಎನ್ ಕುಮಾರ್ ಫಿಲ್ಮ್ ಚೇಂಬರ್ ಮೊರೆ ಹೋದರೆ, ಸುದೀಪ್ (Sudeep) ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಇವರ ಮಧ್ಯೆ ಮೂಡಿರುವ ಮನಸ್ತಾಪವನ್ನು ಪರಿಹರಿಸಲು ರವಿಚಂದ್ರನ್ ಮುಂದಾಗಿದ್ದಾರೆ. ‘ನಾನು ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಅಲ್ಲಿಯವರೆಗೆ ಎಲ್ಲರೂ ಶಾಂತರಾಗಿರಿ. ನನ್ನ- ಸುದೀಪ್ ಮಧ್ಯೆ ತಂದಿಡಬೇಡಿ’ ಎಂದು ರವಿಚಂದ್ರನ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on