AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಾಳೆ ಕಾಂಗ್ರೆಸ್​ ಪಕ್ಷಕ್ಕೆ ಯಾವ್ಯಾವ ನಾಯಕರು ಸೇರ್ಪಡೆ ಆಗ್ತಾರೆ ಗೊತ್ತಾ; ಡಿಕೆ ಸುರೇಶ್​ ಹೇಳಿದ್ದಿಷ್ಟು

Video: ನಾಳೆ ಕಾಂಗ್ರೆಸ್​ ಪಕ್ಷಕ್ಕೆ ಯಾವ್ಯಾವ ನಾಯಕರು ಸೇರ್ಪಡೆ ಆಗ್ತಾರೆ ಗೊತ್ತಾ; ಡಿಕೆ ಸುರೇಶ್​ ಹೇಳಿದ್ದಿಷ್ಟು

ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 14, 2023 | 9:11 PM

Share

ನಾವು ಯಾರ ಜೊತೆಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಸಂವಿಧಾನ, ಜಾತ್ಯತೀತ ತತ್ವಗಳ ಪರ ಹೋರಾಟ ಮಾಡುತ್ತಾ ಬಂದಿದ್ದೇವೆ. ಕೆಲವರು ಅಧಿಕಾರಕ್ಕಾಗಿ ಎಲ್ಲ ಸಂದರ್ಭದಲ್ಲೂ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಅಂಥವರ ಬಗ್ಗೆ ನಾನು ಮಾತನಾಡುವ ಅವಶ್ಯಕತೆಯಿಲ್ಲ ಎಂದರು.

ಬೆಂಗಳೂರು, ಸೆ.14: ಜೆಡಿಎಸ್ ಪ್ರಮುಖ ನಾಯಕ ಕಬಡ್ಡಿ ಬಾಬು ಭೇಟಿ ಬಳಿಕ ಸಂಸದ ಡಿ.ಕೆ.ಸುರೇಶ್ (DK Suresh), ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ಗಳು ನಾಳೆ ಕಾಂಗ್ರೆಸ್ (Congress) ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ‘ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷ ಬಲವರ್ಧನೆ ಕೆಲಸ ಮಾಡುತ್ತಿದ್ದೇವೆ. ಕಬಡ್ಡಿ ಬಾಬು, ಪುತ್ರ ಕಾಂಗ್ರೆಸ್ ಪಕ್ಷ ಸೇರಲು ಆಸಕ್ತಿ ತೋರಿಸಿದ್ದಾರೆ. ಬೆಂಗಳೂರು ದಕ್ಷಿಣ, ಪದ್ಮನಾಭನಗರ ಕ್ಷೇತ್ರದ ಹಲವರು ಪಕ್ಷ ಸೇರುತ್ತಾರೆ ಎಂದರು. ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಪಕ್ಷ ಸೇರುವುದಾಗಿ ಮುಂದೆ ಬಂದಿದ್ದಾರೆ. ಬಿಜೆಪಿ, ಜೆಡಿಎಸ್ ಒಂದಾಗುತ್ತಿರುವ ಬಗ್ಗೆ ಕೇಳಿದ್ದೇನೆ, ನಾವು ಯಾರ ಜೊತೆಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಸಂವಿಧಾನ, ಜಾತ್ಯತೀತ ತತ್ವಗಳ ಪರ ಹೋರಾಟ ಮಾಡುತ್ತಾ ಬಂದಿದ್ದೇವೆ. ಕೆಲವರು ಅಧಿಕಾರಕ್ಕಾಗಿ ಎಲ್ಲ ಸಂದರ್ಭದಲ್ಲೂ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಅಂಥವರ ಬಗ್ಗೆ ನಾನು ಮಾತನಾಡುವ ಅವಶ್ಯಕತೆಯಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More