‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ

‘ಪವಿತ್ರಾ ಗೌಡಗೆ ಲೋ ಬಿಪಿ’: ಆರೋಪಿಗಳ ತಪಾಸಣೆ ನಡೆಸಿದ ವೈದ್ಯರ ಪ್ರತಿಕ್ರಿಯೆ
|

Updated on: Jun 18, 2024 | 10:57 PM

ದರ್ಶನ್​, ಪವಿತ್ರಾ ಗೌಡ ಮುಂತಾದವರು ರೇಣುಕಾ ಸ್ವಾಮಿಯ ಕೊಲೆ ಕೇಸ್​ನಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಸರಿಯಾಗಿ ಊಟ-ತಿಂಡಿ ಸೇವಿಸಿಲ್ಲ. ಹಾಗಾಗಿ ಬಿಪಿ ಲೋ ಆಗಿದೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಕಾರಣದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ವೈದ್ಯರು ಮಾಧ್ಯಮಗಳ ಜೊತೆ ಮಾತನಾಡಿ, ಆರೋಪಿಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಆರೋಗ್ಯದಲ್ಲಿ ಇಂದು (ಜೂನ್​ 18) ಏರುಪೇರು ಆಗಿತ್ತು. ಹಾಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಪವಿತ್ರಾ ಗೌಡ (Pavithra Gowda) ಅವರ ಆರೋಗ್ಯ ತಪಾಸಣೆ ಮಾಡಿ, ಚಿಕಿತ್ಸೆ ನೀಡಿದ ವೈದ್ಯರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪವಿತ್ರಾ ಗೌಡ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಲು ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ಪ್ರತಿದಿನ ಚೆಕಪ್​ಗೆ ಹೋಗುತ್ತೇವೆ. ಪವಿತ್ರಾ ಗೌಡ ಬೆಳಗ್ಗೆಯಿಂದ ಆಹಾರ ಸೇವಿಸಿಲ್ಲ. ಹಾಗಾಗಿ, ಗ್ಲೂಕೋಸ್​ ಲೆವೆಲ್​ ಕಡಿಮೆ ಇತ್ತು. ಐವಿ ಫ್ಯೂಯಿಡ್​ ಹಾಕಿದ್ದೇವೆ. ಸ್ವಲ್ಪ ಗ್ಯಾಸ್​ಟ್ರೈಟಿಸ್​ ಇತ್ತು. ಅದನ್ನು ಹೊರತು ಪಡಿಸಿದರೆ ಅವರು ಚೆನ್ನಾಗಿದ್ದಾರೆ. ಸ್ವಲ್ಪ ಲೋ ಬಿಪಿ ಆಗಿತ್ತು. ಎಲ್ಲ ಆರೋಪಿಗಳ ಆರೋಗ್ಯ ಚೆನ್ನಾಗಿದೆ. ಏನೂ ತೊಂದರೆ ಇಲ್ಲ’ ಎಂದು ವೈದ್ಯರು ಹೇಳಿದ್ದಾರೆ. ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಹತ್ಯೆ ಮಾಡಿದ ಆರೋಪ ದರ್ಶನ್​ (Darshan) ಮತ್ತು ಗ್ಯಾಂಗ್​ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ