AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ

[lazy-load-videos-and-sticky-control id=”pp8QQEYZ_cU”] ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು. IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ […]

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 06, 2020 | 2:44 PM

Share

[lazy-load-videos-and-sticky-control id=”pp8QQEYZ_cU”]

ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ ಮೇಲೆ ಬರೆಸಿಕೊಂಡಿರುವ ಡಾ. ರವೀಂದ್ರನಾಥ್​ ಜೀವನೋಪಾಯಕ್ಕಾಗಿ ಸದ್ಯ ಆಟೋ ಚಾಲಕನಾಗಿದ್ದಾರೆ. ಜೊತೆಗೆ, ರಾಜ್ಯದ ನಾಲ್ಕು ಜನ ಪ್ರಭಾವಿ IAS ಅಧಿಕಾರಿಗಳ ವಿರುದ್ಧ ಆರೋಪ ಸಹ ಮಾಡಿದ್ದಾರೆ. ಹೀಗಾಗಿ, ವೈದ್ಯನ ಸಂಕಷ್ಟಕ್ಕೆ ಸ್ಪಂದಿಸಲು‌ ಮುಂದಾದ ಆರೋಗ್ಯ ಸಚಿವ ಶ್ರೀರಾಮುಲು ಡಾ. ರವೀಂದ್ರನಾಥ್​ಗೆ ಕರೆಮಾಡಿ, ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದು ತಮ್ಮನ್ನು ಭೇಟಿ ಮಾಡುವಂತೆ  ಸೂಚನೆ ನೀಡಿದ್ದಾರೆ.

Published On - 12:26 pm, Sun, 6 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು