ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು: ವಿಡಿಯೋ ನೋಡಿ

|

Updated on: Apr 10, 2023 | 2:35 PM

ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ನಡೆದಿದೆ.

ರಾಮನಗರ: ಮೂಲಭೂತ ಸೌಕರ್ಯ ಒದಗಿಸದೇ ಪ್ರಚಾರಕ್ಕೆ ಬಂದ್ರೆ ಓಟ್ ಕೊಡಲ್ಲ ಎಂದು ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಇಂದು(ಏಪ್ರಿಲ್​ 10) ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ಪ್ರಚಾರಕ್ಕೆ ಬಂದಾಗ ಈ ಘಟನೆ ನಡೆದಿದೆ.

ನಮಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ. ನಿಮ್ಮ ತಾಯಿ ಬಂದು ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕೆಲಸ ಪೂರ್ಣ ಆಗಿಲ್ಲ. ನಮ್ಮ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹಾಗಾಗಿ ನಾವು ಮತಹಾಕಲ್ಲ ಎಂದು ನಿಖಿಲ್​ಗೆ ಮಹಿಳೆಯರು ಕ್ಲಾಸ್ ತೆಗೆದುಕೊಂಡರು. ಈ ವೇಳೆ ಸಮಾಧಾನದಿಂದಲೇ ಮಹಿಳೆಯರ ಸಮಸ್ಯೆ ಆಲಿಸಿದ ನಿಖಿಲ್, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

Published On - 2:32 pm, Mon, 10 April 23