AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜಮೀರ್ ಅಹ್ಮದ್ ಹೇಳಿದಂತೆ ಕುಣಿಯುತ್ತಿದ್ದಾರೆಂದು ಅಧಿಕಾರಿಗಳನ್ನು ಎಚ್ಚರಿಸಿದ ಪ್ರಲ್ಹಾದ್ ಜೋಶಿ

ಸಚಿವ ಜಮೀರ್ ಅಹ್ಮದ್ ಹೇಳಿದಂತೆ ಕುಣಿಯುತ್ತಿದ್ದಾರೆಂದು ಅಧಿಕಾರಿಗಳನ್ನು ಎಚ್ಚರಿಸಿದ ಪ್ರಲ್ಹಾದ್ ಜೋಶಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 01, 2024 | 3:57 PM

Share

ವಕ್ಫ್ ಭೂವಿವಾದ ಒಂದು ವಿಷಯವೇ ಅಲ್ಲ, ರೈತರಿಗೆ ನೀಡಿರುವ ನೋಟೀಸ್​ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರು ಹೇಳಿದಾಗ್ಯೂ ವಿವಾದ ಕೊನೆಗಾಣಿತ್ತಿಲ್ಲ ಮತ್ತು ನೋಟೀಸ್​ಗಳನ್ನು ನೀಡುವ ಕಾರ್ಯ ಮುಂದುವರಿದಿದೆ. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಮಾತ್ರ ಒಂದು ಸ್ಪಷ್ಟ ಚಿತ್ರಣ ಸಿಗಬಹುದು

ಹುಬ್ಬಳ್ಳಿ: ಹಾವೇರಿ ಜಿಲ್ಲೆಯಲ್ಲಿ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿಗಳು ವಕ್ಫ್ ಭೂವಿವಾದ ಕುರಿತಂತೆ ಸಚಿವ ಜಮೀರ್ ಅಹ್ಮದ್ ಖಾನ್ ಆದೇಶದ ಮೇರೆಗೆ ರೈತರಿಗೆ ನೋಟೀಸ್​ಗಳನ್ನು ನೀಡುತ್ತಿರುದನ್ನು ಉಗ್ರವಾಗಿ ಖಂಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಜಮೀರ್ ಒಂದು ಮತಾಂಧ ಶಕ್ತಿ, ಅವರು ಹೇಳಿದ ತಾಳಕ್ಕೆ ಅಧಿಕಾರಿಗಳು ಕುಣಿಯುತ್ತಿದ್ದಾರೆ, ಈ ಪ್ರಕರಣ ಸುಪ್ರೀಂ ಕೋರ್ಟ್​​​ವರೆಗೆ ಹೋಗಲಿದೆ , ಡಿಸಿ ಮತ್ತು ಸಿಈಓಗಳು ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂಬುದು ಕಾಂಗ್ರೆಸ್​ಗೆ ಈಗ ಗೊತ್ತಾಗಿದೆ; ಪ್ರಲ್ಹಾದ್ ಜೋಶಿ ಲೇವಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More