ಸಚಿವ ಜಮೀರ್ ಅಹ್ಮದ್ ಹೇಳಿದಂತೆ ಕುಣಿಯುತ್ತಿದ್ದಾರೆಂದು ಅಧಿಕಾರಿಗಳನ್ನು ಎಚ್ಚರಿಸಿದ ಪ್ರಲ್ಹಾದ್ ಜೋಶಿ
ವಕ್ಫ್ ಭೂವಿವಾದ ಒಂದು ವಿಷಯವೇ ಅಲ್ಲ, ರೈತರಿಗೆ ನೀಡಿರುವ ನೋಟೀಸ್ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರು ಹೇಳಿದಾಗ್ಯೂ ವಿವಾದ ಕೊನೆಗಾಣಿತ್ತಿಲ್ಲ ಮತ್ತು ನೋಟೀಸ್ಗಳನ್ನು ನೀಡುವ ಕಾರ್ಯ ಮುಂದುವರಿದಿದೆ. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಮಾತ್ರ ಒಂದು ಸ್ಪಷ್ಟ ಚಿತ್ರಣ ಸಿಗಬಹುದು
ಹುಬ್ಬಳ್ಳಿ: ಹಾವೇರಿ ಜಿಲ್ಲೆಯಲ್ಲಿ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿಗಳು ವಕ್ಫ್ ಭೂವಿವಾದ ಕುರಿತಂತೆ ಸಚಿವ ಜಮೀರ್ ಅಹ್ಮದ್ ಖಾನ್ ಆದೇಶದ ಮೇರೆಗೆ ರೈತರಿಗೆ ನೋಟೀಸ್ಗಳನ್ನು ನೀಡುತ್ತಿರುದನ್ನು ಉಗ್ರವಾಗಿ ಖಂಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು, ಜಮೀರ್ ಒಂದು ಮತಾಂಧ ಶಕ್ತಿ, ಅವರು ಹೇಳಿದ ತಾಳಕ್ಕೆ ಅಧಿಕಾರಿಗಳು ಕುಣಿಯುತ್ತಿದ್ದಾರೆ, ಈ ಪ್ರಕರಣ ಸುಪ್ರೀಂ ಕೋರ್ಟ್ವರೆಗೆ ಹೋಗಲಿದೆ , ಡಿಸಿ ಮತ್ತು ಸಿಈಓಗಳು ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಿದೆ ಎಂಬುದು ಕಾಂಗ್ರೆಸ್ಗೆ ಈಗ ಗೊತ್ತಾಗಿದೆ; ಪ್ರಲ್ಹಾದ್ ಜೋಶಿ ಲೇವಡಿ
Loading...
Unable to load recommendations.
Follow Us