AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಗೆಲ್ಲುತ್ತೆ ಅಂತ ಈಗ್ಲೇ ಹೇಳ್ಬೇಡಿ! ಅನಿಲ್ ಕುಂಬ್ಳೆ ಹೀಗೆಂದಿದ್ದೇಕೆ ನೋಡಿ

ಆರ್​ಸಿಬಿ ಗೆಲ್ಲುತ್ತೆ ಅಂತ ಈಗ್ಲೇ ಹೇಳ್ಬೇಡಿ! ಅನಿಲ್ ಕುಂಬ್ಳೆ ಹೀಗೆಂದಿದ್ದೇಕೆ ನೋಡಿ

ಗಣಪತಿ ಶರ್ಮಾ
|

Updated on: Jun 03, 2025 | 12:57 PM

Share

ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿಯಾಗಿ ನೇಮಕಗೊಂಡಿರುವ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಐಪಿಎಲ್ ಫೈನಲ್ ಆಡುತ್ತಿರುವ ಆರ್​ಸಿಬಿಗೆ ಶುಭ ಹಾರೈಸಿದ್ದಾರೆ. ಆದರೆ, ಆರ್​ಸಿಬಿ ಗೆಲ್ಲುತ್ತದೆ ಎಂದು ಈಗಲೇ ಹೇಳಬೇಡಿ. ಆದರೆ, ಗೆಲ್ಲಬೇಕು ಎಂಬುದು ನಮ್ಮ ಹೃದಯದ ಮಾತು, ಹಾರೈಕೆ ಎಂದರು. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಜೂನ್ 3: ಐಪಿಎಲ್ ಫೈನಲ್ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ, ಇದೇ ತಂಡದ ಮಾಜಿ ನಾಯಕರೂ ಆಗಿರುವ ಅನಿಲ್ ಕುಂಬ್ಳೆ ಶುಭ ಹಾರೈಸಿದ್ದಾರೆ. ಆದರೆ, ಆರ್​ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್​​ಸಿಬಿ ಗೆಲ್ಲಬೇಕು ಎಂಬುದು ನಮ್ಮ ಹೃದಯದ ಮಾತು. ಹಾಗೆಯೇ ಆಗಲಿ ಎಂದು ಹಾರೈಸೋಣ ಎಂದರು. ಪಂಜಾಬ್​ ತಂಡದಲ್ಲೂ ನಾನು ಆಡಿದ್ದೆ. ಆರ್​​ಸಿಬಿಯಲ್ಲೂ ಆಡಿದ್ದೆ. ಎರಡೂ ತಂಡಗಳು ಬೆಸ್ಟ್. ಉತ್ತಮ ಪ್ರದರ್ಶನ ನೀಡಿದ ತಂಡಗಳೇ ಫೈನಲ್​ ಪ್ರವೇಶಿಸಿವೆ. ಆರ್​ಸಿಬಿ ಗೆಲ್ಲಲಿ ಎಂಬುದು ಹಾರೈಕೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More